25.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿರಾಜ್ಯ ಸುದ್ದಿ

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

ಬೆಳ್ತಂಗಡಿ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಮತ್ತೆ ಬಂದಿದೆ. ರಾಜ್ಯದಲ್ಲಿ ಚುನಾವಣೆಯ ಬಿಸಿ ಏರಿರುವ ನಡುವೆ ದೇಶದ ಕ್ರಿಕೆಟ್ ಪ್ರೇಮಿಗಳಲ್ಲಿ ಐಪಿಎಲ್ ಕುತೂಹಲ ಗರಿಗೆದರಿದೆ

. ರಾಜಕಾರಣಿಗಳ ಮತಬೇಟೆ, ಮತದಾರರ ಹಕ್ಕು ಚಲಾವಣೆಯ ನಡುವೆ,ಕ್ರಿಕೆಟಿಗರ ವಿಕೆಟ್ ಬೇಟೆ, ರನ್ ದಾಹ, ಸಿಕ್ಸರ್- ಬೌಂಡರಿಗಳ ಸಿರಿಮಳೆ ಸಾಗಲಿದೆ. ಕರೋನಾ ಭೀತಿಯನ್ನೆಲ್ಲ ನಿವಾರಿಸಿಕೊಂಡು ಐಪಿಎಲ್ ತನ್ನ 16ನೇ ಆವೃತ್ತಿಯಲ್ಲಿ ಮತ್ತೆ ಹಿಂದಿನ ಸ್ವರೂಪ, ಸಂಭ್ರಮ, ಶ್ರೀಮಂತಿಕೆಯಲ್ಲೇ ಮರಳುತ್ತಿದೆ. ಟೂರ್ನಿಯಲ್ಲಿ ಆಡುವ ಎಲ್ಲ 10 ತಂಡಗಳು ಮತ್ತೆ ತಮ್ಮ ತವರು ತಾಣಗಳಲ್ಲೇ ಲೀಗ್ ಪಂದ್ಯಗಳನ್ನು ಆಡುವ ಅವಕಾಶ ಪಡೆದುಕೊಂಡಿವೆ. ಪ್ರೇಕ್ಷಕರೂ ಮತ್ತೆ ಶೇಕಡ 100 ಪ್ರಮಾಣದಲ್ಲಿ ಕ್ರೀಡಾಂಗಣಕ್ಕೆ ಮರಳುವ ಅವಕಾಶ ಪಡೆದುಕೊಂಡಿದ್ದಾರೆ. ಟಿವಿ ಜತೆಗೆ ಓಟಿಟಿ ವೇದಿಕೆಯಲ್ಲೂ ಐಪಿಎಲ್ ಮನರಂಜನೆ ಕ್ರಿಕೆಟ್ ಪ್ರೇಮಿಗಳ ಮನೆ- ಮೊಬೈಲ್ ತಲುಪಲಿದೆ. ಕಳೆದ ಆವೃತ್ತಿಯಲ್ಲಿ ಎರಡು ಹೊಸ ತಂಡಗಳು ಸೇರಿರುವುದರಿಂದ ಐಪಿಎಲ್ ಕುಟುಂಬವೂ ದೊಡ್ಡದಾಗಿದೆ.
ತಂಡಗಳು:
ಮುಂಬೈ ಇಂಡಿಯನ್ಸ್, ಕೋಲ್ಕತ ನೈಟ್’ರೈಡರ್ಸ್, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಆರ್ ಸಿಬಿ, ಚೆನ್ನೈ ಸೂಪರ್ ಕಿಂಗ್ಸ್, ಲಖನೌ ಸೂಪರ್ ಜೈಂಟ್ಸ್ , ಪಂಜಾಬ್ ಕಿಂಗ್ಸ್ , ಗುಜರಾತ್ ಟೈಟಾನ್ಸ್ , ಸನ್’ರೈಸರ್ಸ್ ಹೈದರಾಬಾದ್

Related posts

ಉಜಿರೆ: ಮಾಚಾರು ಬಳಿ ಕಾರು -ಬೈಕ್ ಅಪಘಾತ: ಬೈಕ್ ಸವಾರನಿಗೆ ಗಾಯ

Suddi Udaya

ಶಿಬಾಜೆಯಲ್ಲಿ ದಲಿತ ಯುವಕನ ಹತ್ಯೆ ಆರೋಪ ಪ್ರಕರಣ: ಆರೋಪಿಗಳನ್ನು ಬಂಧಿಸುವಂತೆ ದಲಿತ ಸಂಘಟನೆಯಿಂದ ಒತ್ತಾಯ

Suddi Udaya

ಗುರುವಾಯನಕೆರೆ: ಎಕ್ಸೆಲ್ ಕಾಲೇಜು ವತಿಯಿಂದ ನೀಟ್ ಸಾಧಕ ಆದಿತ್ ಜೈನ್ ಗೆ ಸನ್ಮಾನ

Suddi Udaya

ನಿಡ್ಲೆ 18ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ: ಅಧ್ಯಕ್ಷರಾಗಿ ತಿಮ್ಮಪ್ಪ ಗೌಡ ನೂಜಿಲ

Suddi Udaya

ತೋಟತ್ತಾಡಿ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya
error: Content is protected !!