28.2 C
ಪುತ್ತೂರು, ಬೆಳ್ತಂಗಡಿ
September 8, 2026
Uncategorized

ಕಡಿರುದ್ಯಾವರ ಹೇಡ್ಯ, ಬೊಳ್ಳೂರು ಬೈಲು ಪರಿಸರಗಳಲ್ಲಿಕಾಡಾನೆ ಸಂಚಾರ

ಕಡಿರುದ್ಯಾವರ ಗ್ರಾಮದ ಹೇಡ್ಯ,ಬೊಳ್ಳೂರು ಬೈಲು ಪರಿಸರಗಳಲ್ಲಿ ಗುರುವಾರ ತಡರಾತ್ರಿ ಕಾಡಾನೆ ಸಂಚರಿಸುವ ಕುರಿತು ಸ್ಥಳಿಯರು ತಿಳಿಸಿದ್ದಾರೆ.
ಹೇಡ್ಯದಿಂದ ಬೊಳ್ಳೂರುಬೈಲಿನತ್ತ ಹೋಗಿರುವ ಕಾಡಾನೆ ಸ್ಥಳೀಯ ಪ್ರದೇಶದ ಮನೆಗಳ ಸಮೀಪದಿಂದಲೇ ಹೋಗಿ, ಮುಖ್ಯರಸ್ತೆಯಲ್ಲೂ ಸಂಚರಿಸಿದೆ. ರಾತ್ರಿ ಒಂದು ಗಂಟೆ ವೇಳೆಗೆ ಕಾಡಾನೆ ಸಂಚಾರ ಸ್ಥಳೀಯರ ಗಮನಕ್ಕೆ ಬಂದಿದೆ.
ಡಿ ಆರ್ ಎಫ್ ಓ ರವೀಂದ್ರ ಅಂಕಲಗಿ ಹಾಗೂ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.ಕಾಡಾನೆ ಸಂಚರಿಸಿದ ಪ್ರದೇಶಗಳಲ್ಲಿ ಯಾವುದೇ ಕೃಷಿ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸಲಗ ಬೊಳ್ಳೂರುಬೈಲು ಮೂಲಕ ಕಿಲ್ಲೂರಿನತ್ತ ಹೋಗಿರುವ ಶಂಕೆ ವ್ಯಕ್ತವಾಗಿದೆ.

Related posts

ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನ ವತಿಯಿಂದ 20 ನೇ ವರ್ಷದ ಪುಸ್ತಕ ವಿತರಣೆ : ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ – ನಿವೃತ್ತ ಯೋಧರಿಗೆ ಗೌರವಾರ್ಪಣೆ

Suddi Udaya

ನಾವೂರು: ಮೋರ್ತಾಜೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಉದ್ಘಾಟನೆ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಅಂಡೆತಡ್ಕ ಸರಕಾರಿ ಉನ್ನತಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ. ಹಿ. ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ

Suddi Udaya

ರಾಜ್ಯ ಸರ್ಕಾರ ವಿರುದ್ಧ ಬೃಹತ್ ಪ್ರತಿಭಟನೆ ಮಲವಂತಿಗೆ ಗ್ರಾ.ಪಂ ಎದುರು ಪ್ರತಿಭಟನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ಕಂಪೌಂಡ್ ಕುಸಿತ

Suddi Udaya
error: Content is protected !!