23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿ ಮಹಾಸಭೆಹಾಗೂ ಪದಾಧಿಕಾರಿಗಳ ಆಯ್ಕೆ

ನೂತನ ಅಧ್ಯಕ್ಷರಾಗಿ ಶ್ರೀಮತಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆ

ಉಜಿರೆ: ಉಜಿರೆ ವಲಯ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಉಜಿರೆ ವಲಯ ಸಮಿತಿಯ ಮಹಾಸಭೆಯು ಮಾ.೨೮ರಂದು ಶಾರದಾ ಮಂಟಪದಲ್ಲಿ ವಲಯದ ಅಧ್ಯಕ್ಷರಾದ
ಶ್ರೀಮತಿ ವೇದಾವತಿ ಜನಾರ್ದನ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕುಶಾಲಪ್ಪ ಗೌಡ ಇವರು ಸರ್ಕಾರದಿಂದ ಸಿಗುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಇದರ ಪ್ರಯೋಜನ ಪಡೆಯುವಂತೆ ವಿನಂತಿಸಿದರು. ಬೆಳ್ತಂಗಡಿ ತಾಲೂಕಿನಲ್ಲಿ ಹಲವು ಜನರಿಗೆ ಉಚಿತವಾಗಿ ಮೆಷೀನ್ ಹಾಗೂ ಆರ್ಥಿಕ ಧನ ಸಹಾಯ ದೊರೆತಿರುವುದು ನಮ್ಮ ಟೈಲರ್ ಸಂಘಟನೆಯಿಂದ ಎಂದು ತಿಳಿಸಿದರು..
ಕ್ಷೇತ್ರ ಸಮಿತಿ ಕಾರ್ಯದರ್ಶಿ ನಾಗೇಶ್ ಉಜಿರೆ, ಕ್ಷೇತ್ರ ಕೋಶಾಧಿಕಾರಿ ಜಯಂತಿ ಚಿದಾನಂದ್, ವಲಯದ ಕಾರ್ಯದರ್ಶಿ ರೂಪ ಜಗದೀಶ್,
ವಲಯದ ಕೋಶಾಧಿಕಾರಿ ಶುಭಲತ ಕನ್ಯಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಭೆಯಲ್ಲಿ ೩೭ ಜನರಿಗೆ ಗುರುತಿನ ಕಾರ್ಡ್ ವಿತರಣೆ ಮಾಡಲಾಯಿತು
ಹೊಸ ಸದಸ್ಯರ ನೋಂದಾವಣೆ ಮಾಡಲಾಯಿತು.
ಈ ಸಂದರ್ಭ ಮುಂದಿನ ಎರಡು ವರ್ಷದ ಅವಧಿಗೆ ನೂತನ ಪದಾಧಿಕಾರಿ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಶ್ರೀಮತಿ ರೂಪ ಜಗದೀಶ್ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಝೀನತ್ ಉಜಿರೆ ಆಯ್ಕೆಯಾದರು.
ಜೊತೆ ಕಾರ್ಯದರ್ಶಿಯಾಗಿ ಭಾಗ್ಯಜ್ಯೋತಿ, ಕೋಶಾಧಿಕಾರಿಯಾಗಿ ಬಾಲಕೃಷ್ಣ, ಕ್ಷೇತ್ರ ಸಮಿತಿಗೆ ವಿನೋದ, ಜಯ ಚಿದಾನಂದ್, ವಿನುತ, ವೇದಾವತಿ ಜನಾರ್ಧನ, ನಾಗೇಶ್ ಉಜಿರೆ, ಉಪಾಧ್ಯಕ್ಷರಾಗಿ ವಿಠಲ, ಸವಿತಾ ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಮಮತಾ ಕಲ್ಮಂಜ, ವೇದಾವತಿ ಕನ್ಯಾಡಿ, ನವೀನ, ವಾಣಿ, ಹರಿಣಾಕ್ಷಿ ಇವರನ್ನು ಆಯ್ಕೆ ಮಾಡಲಾಯಿತು. ಈ ಸಭೆಯಲ್ಲಿ ಝೀನತ್ ಉಜಿರೆ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಭಾಗ್ಯಜ್ಯೋತಿ ಧನ್ಯವಾದವಿತ್ತರು.

Related posts

ಡಿ.15: ಸಾವ್ಯ ದ.ಕ.ಜಿ.ಪಂ. ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸಂಭ್ರಮಾಚರಣೆ

Suddi Udaya

ಕೊಕ್ಕಡ ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ ಸಿರಿ ಸಂಸ್ಥೆಗೆ ಖ್ಯಾತ ಚಲನಚಿತ್ರ ನಟಿ ಶ್ರುತಿ ಭೇಟಿ

Suddi Udaya

ಧರ್ಮಸ್ಥಳ : ಶ್ರೀ ಧ.  ಮಂ.  ಆಂಗ್ಲ ಮಾಧ್ಯಮ ಶಾಲೆಯಲ್ಲಿ  ನಾಯಕತ್ವ ತರಬೇತಿ ಕಾರ್ಯಾಗಾರ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya
error: Content is protected !!