24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಾ.27ರಿಂದ ನಾಲ್ಕು ದಿನಗಳ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಉದ್ಘಾಟಕರಾಗಿ ಮಕ್ಕಳ ಹಕ್ಕುಗಳ ಸಮನ್ವಯ ಅಧಿಕಾರಿಯಾದ ವಿನೋದ್ ಕಲ್ಲಾಜೆ ಆಗಮಿಸಿದ್ದರು.


ಮುಖ್ಯ ಅಭ್ಯಂಗತರಾಗಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಲಾ ಶಿಕ್ಷಕರಾದ ಸುಂದರ್ ನಾಯ್ಕ್ , ಶ್ರೀಮತಿ ಪೈ ಹಾಗೂ ರಜನಿ ಕಾಮತ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು..
ವಿದ್ಯಾರ್ಥಿಗಳಿಗೆ ಅಜ್ಜಿ ಕಥೆ ,ಬಾಲಗೀತೆ ,ಕ್ರಾಫ್ಟ್ ವರ್ಕ್, ಗಳು ಬೆಂಕಿ ರಹಿತ ಆಹಾರ ಪದಾರ್ಥಗಳು, ಮೆಹಂದಿ, ಹೇರ್ ಸ್ಟೈಲ್, ಫೇಶಿಯಲ್, ಎಂಬ್ರಾಯಿಡರ್ ವಕ್೯, ಕಸೂತಿ, ವಿದ್ಯುತ್ ಉಪಕರಣಗಳ ಬಳಕೆ ಮತ್ತು ಜಾಗ್ರತಿ, ನಾಯಕತ್ವದ ಬಗ್ಗೆ ಅರಿವು, ಇತ್ಯಾದಿಗಳ ಬಗ್ಗೆ ತರಬೇತಿ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ ಸ್ಮೀತೇಶ್ ಬಾರ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಬೇಸಿಗೆ ಶಿಬಿರದಲ್ಲಿ ನಡೆದಂತಹ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಮುಂದಿನ ಜೀವನ ಶೈಲಿಯಲ್ಲಿ ಏಕಾಗ್ರತೆ ,ಶಿಸ್ತು , ತಾಳ್ಮೆ ಆಲಿಸುವಿಕೆ ಯಾವ ರೀತಿ ಬೆಳೆಸಬೇಕು ಗುರು ಹಿರಿಯರನ್ನು ಹೇಗೆ ಸ್ಮರಿಸಬೇಕು ಎಂಬುದನ್ನು ಮಕ್ಕಳಿಗೆ ತಿಳಿಸಿದರು.
ಸಮಾರೋಪದ ಉಪಸ್ಥಿತಿಯಲ್ಲಿ ಸಹನ ಜೈನ್ ಹರ್ಬಲ್ ಬ್ಯೂಟಿಷಿಯನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕುಮಾರಿ ಅನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿ , ವಿದ್ಯಾರ್ಥಿಯ ಯಶ್ವಿತ ಸ್ವಾಗತಿಸಿ ,ವಿದ್ಯಾರ್ಥಿ ಕುಮಾರಿ ಪ್ರಾಪ್ತಿ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ನೆರಿಯ: ಮನೆಗೆ ಬೆಂಕಿ ತಗುಲಿ ಹಾನಿಯಾದ ಕುಟುಂಬಕ್ಕೆ ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಧನಸಹಾಯ ಹಸ್ತಾಂತರ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ನಾವೂರು ಗ್ರಾ.ಪಂ. ನಲ್ಲಿ ವಿವಿಧ ಬೇಡಿಕೆ ಈಡೇರಿಕೆಗಾಗಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya
error: Content is protected !!