July 23, 2026
ಸಾಧಕರು

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ಅಭಿನಂದನಾ ಸಮಾರಂಭ ಮಾ.31ರಂದು ಸಂಜೆ ಕುತ್ಯಾರು ದೇವಸ್ಥಾನದ ವಠಾರದಲ್ಲಿ ಜರುಗಿತು.

ಮಾಜಿ ಸೈನಿಕರ ಸಂಘ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ, ಕರಾಡ್ಹ ಬ್ರಾಹ್ಮಣ ಸಮಾಜ ಬೆಳ್ತಂಗಡಿ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ, ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಸಭಾ, ಕೂಟ ಜಗತತು ಸಾಲಿಗ್ರಾಮ ಅಂಗ ಸಂಸ್ಥೆ ಬೆಳ್ತಂಗಡಿ, ಚಿತ್ಪಾವನ ಸಂಘಟನೆ ಮುಂಡಾಜೆ, ತುಳು ಶಿವಳ್ಳಿ ಸಭಾ ಉಜಿರೆ, ಉಪ್ಪಿನಂಗಡಿ ಹವ್ಯಕ

ಮಂಡಲ ಉಜಿರ ವಲಯ, ಭಿಡೆ ಕುಟುಂಬಸ್ಥರು, ವರ್ತಕರು ಬೆಳ್ತಂಗಡಿ ಇವರು ನಿವೃತ್ತ ಕರ್ನಲ್ ನಿತಿನ್ ಆರ್. ಭಿಡೆಯವರನ್ನು ಹೂ ಹಾರ ಹಾಕಿ ಗೌರವಿಸಿದರು. ನಿತಿನ್ ಆರ್. ಭಿಡೆಯವರು ತನ್ನ ಸೇವಾ ಅವಧಿಯ ಅನುಭವಗಳ ಬಗ್ಗೆ ಮಾತನಾಡಿ, ಸೈನಿಕರಿಗೆ ದೇಶದ ರಕ್ಷಣೆಯೇ ಮುಖ್ಯ ಧ್ಯೇಯವಾಗಿದ್ದು, ಭಾರತ ಮಾತೆಯ ಸೇವೆ ಜೀವನದಲ್ಲಿ ದೊರೆತ ಪುಣ್ಯ ಕಾರ್ಯವಾಗಿದೆ ಎಂದು ಹೇಳಿ, ಅಭಿನಂದಿಸಿದ ಎಲ್ಲಾ ಸಂಘ – ಸಂಸ್ಥೆಯವರಿಗೆ ಕೃತಜ್ಞತೆ ಸಲ್ಲಿಸಿದರು. ಬಾಲಕೃಷ್ಣ ಸಹಸ್ರಬುದ್ಯೆ ದೇಶ ಭಕ್ತಿ

ಹಾಡಿದರು. ಬೆಳ್ತಂಗಡಿ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ ಸ್ವಾಗತಿಸಿದರು. ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಕಾರ್ಯಕ್ರಮ ನಿರೂಪಿಸಿ, ಯೋಗೀಶ್ ಭಿಡೆ ವಂದಿಸಿದರು. ಮೇ|ಜ| ಎಂ.ವಿ ಭಟ್ ಸೇರಿದಂತೆ ನಿವೃತ್ತ ಸೈನಿಕರ ಸಂಘದ ಪದಾಧಿಕಾರಿ, ವಿವಿಧ ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

Related posts

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: 1ವರ್ಷ 8 ತಿಂಗಳಿನ ವೇದ್ಯ ಶ್ರೀಶಾಸ್ತ ರವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್

Suddi Udaya

ಕಿರುತೆರೆ ನಿರ್ದೇಶಕ ಸುಭಾಷ್ ಅರ್ವರವರಿಗೆ ಉತ್ತಮ ನಿರ್ದೇಶಕ ಅನುಬಂಧ ಆವಾರ್ಡ್-2023: ಮಂಗಳ ಗೌರಿ, ರಂಗನಾಯಕಿ, ಗೀತಾ, ಕೆಂಡಸಂಪಿಗೆ ಧಾರಾವಾಹಿ ನಿರ್ದೇಶನ

Suddi Udaya

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸಂಘಟನಾ ಕಾರ್ಯದಶಿಯಾಗಿ ಡಾ.. ಕೆ. ಜಯಕೀರ್ತಿ ಜೈನ್ನೇಮಕ

Suddi Udaya

ಶೇಕ್ ಮಹಮ್ಮದ್ ಆರಿಫ್ ಸಿಎ ಪರೀಕ್ಷೆಯಲ್ಲಿ ಉತ್ತೀರ್ಣ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಸಭೆ

Suddi Udaya
error: Content is protected !!