23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಪೇಜಾವರ ಮಠದ ಪೂಜ್ಯ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಧರ್ಮಸ್ಥಳ ಭೇಟಿ

Suddi Udaya

ಇಂಡೋ ನೇಪಾಳ ಅಂತರಾಷ್ಟ್ರೀಯ ಚಾಂಪಿಯನ್ ಶಿಪ್ ತ್ರೋಬಾಲ್ ಪಂದ್ಯಾಟಕ್ಕೆ ಕಣಿಯೂರು ನ ಯೂನಿತ್. ಕೆ ಆಯ್ಕೆ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಹಿಂದಿ ದಿನಾಚರಣೆ

Suddi Udaya

ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!