ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

Suddi Udaya

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Leave a Comment

error: Content is protected !!