26.3 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ವಿಶ್ವ ಮಾನಸಿಕ ಆರೋಗ್ಯ ದಿನ ಆಚರಣೆ: ಉಜಿರೆಯಲ್ಲಿ ಮ್ಯಾರಥಾನ್ ಓಟ

Suddi Udaya

ಉಜಿರೆ: ಕುಂಜರ್ಪದಲ್ಲಿ 5ನೇ ವರ್ಷದ ದುರ್ಗಾಪೂಜೆ

Suddi Udaya

ವಿಧಾನ ಪರಿಷತ್ ಉಪಚುನಾವಣೆ : ಬೆಳ್ತಂಗಡಿ ಮಂಡಲದ ಬಿಜೆಪಿ ಚುನಾವಣಾ ಸಂಚಾಲಕರಾಗಿ ಪ್ರಭಾಕರ ಆಚಾರ್ಯ, ಸಹ ಸಂಚಾಲಕರಾಗಿ ಅರವಿಂದ ಲಾಯಿಲ

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya
error: Content is protected !!