25.8 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ವಾಣಿ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಬೆಳ್ತಂಗಡಿ: ಸಮಾಜ ಸೇವಕ ಡಾ. ರವಿ ಪೂಜಾರಿ ಕಕ್ಕೆಪದವುರವರಿಗೆ ಕಾಯಕ ಯೋಗಿ ಪ್ರಶಸ್ತಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಕ್ವಿಜ್ ಸ್ಪರ್ಧೆ: ನಾರಾವಿಯ ಸಂತ ಅಂತೋನಿ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya
error: Content is protected !!