September 6, 2026
Uncategorized

ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ ಪ್ರತಿಷ್ಠೆ

ಬೆಳ್ತಂಗಡಿ: ಸೂಳಬೆಟ್ಟು ಬರಯ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಧ್ವಜ ಸ್ತಂಭ(ಕೊಡಿ ಮರ)ದ ಪ್ರತಿಷ್ಠಾ ಕಾರ್ಯ ಮಾ.೩೦ ರಂದು ರಾಮನವಮಿಯ ಶುಭದಿನದಲ್ಲಿ ನೆರವೇರಿತು. ದೇವಳದ ತಂತ್ರಿಗಳಾದ ಕಾಜಿಮುಗೇರು ಸೀತಾರಾಮ ಕೇಳ್ಕರ್‌ ಹಾಗೂ ಪದ್ಮನಾಭ ಜೋಶಿ ಅವರ ನೇತೃತ್ವದಲ್ಲಿ ಪ್ರತಿಷ್ಠಾ ಹೋಮ ಇತ್ಯಾದಿ ವೈದಿಕ ಕಾರ್ಯಕ್ರಮಗಳು ನಡೆದವು. ಅರ್ಚಕರಾದ ಮಧುಸೂದನ ಮರಾಠೆ, ಅಮರೇಶ ಜೋಶಿ ಸಹಕರಿಸಿದರು. ಧ್ವಜ ಸ್ತಂಭಕ್ಕೆ ಮರವನ್ನು ಅಂಡಿಂಜೆಯ ಮುತ್ತಯ್ಯ ಪೂಜಾರಿ ದಾನವಾಗಿ ನೀಡಿದ್ದರೆ, ಮಂಗಳೂರಿನ ಜನಾರ್ದನ ತಾಮ್ಹನ್‌ಕಾರ್‌ ಅವರು ಕೊಡಿಮರಕ್ಕೆ ತಾಮ್ರದ ಹೊದಿಕೆಯ ಸೇವೆಯನ್ನು ಮಾಡಿಸಿದ್ದಾರೆ.
ಆಡಳಿತೆ ಮೊಕ್ತೇಸರ ಸದಾನಂದ ಸಹಸ್ರಬುದ್ಧೆ, ಸಹಕ ಮೊಕ್ತೇಸರುಗಳಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಪುರುಷೋತ್ತಮ ತಾಮ್ಹನ್‌ಕರ್‌ ಉಪಸ್ಥಿತರಿದ್ದರು.

Related posts

ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ರವರಿಗೆ ಅಂತಾರಾಷ್ಟ್ರೀಯ “ಏಷಿಯಾ ಪೆಸಿಫಿಕ್ ಐಕಾನ್ ಅವಾರ್ಡ್ಸ್” ಪ್ರದಾನ

Suddi Udaya

ಕೊಕ್ಕಡ ಬಿಜೆಪಿ ಶಕ್ತಿಕೇಂದ್ರದಲ್ಲಿ ಬೈಠಕ್

Suddi Udaya

ತುಳುವಿಗೆ ಎರಡನೇ ಅಧಿಕೃತ ಭಾಷೆಯ ಸ್ಥಾನ ನೀಡುವಂತೆ ವಿಧಾನಸಭೆಯಲ್ಲಿ ಆಗ್ರಹ

Suddi Udaya

ಮಚ್ಚಿನ ಸರಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಚುನಾವಣೆ ಮಕ್ಕಳಿಗೆ ಪಿಂಕ್ (ಸಖೀ) ಬೂತ್ ನ ಪರಿಕಲ್ಪನೆಯ ಪಾಠ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಭೇಟಿ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮಡಿಕೇರಿಯ ಅಶ್ವಿನಿ ಆಸ್ಪತ್ರೆಯಲ್ಲಿ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!