25.8 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿರಾಜ್ಯ ಸುದ್ದಿ

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

ಬೆಳ್ತಂಗಡಿ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಮತ್ತೆ ಬಂದಿದೆ. ರಾಜ್ಯದಲ್ಲಿ ಚುನಾವಣೆಯ ಬಿಸಿ ಏರಿರುವ ನಡುವೆ ದೇಶದ ಕ್ರಿಕೆಟ್ ಪ್ರೇಮಿಗಳಲ್ಲಿ ಐಪಿಎಲ್ ಕುತೂಹಲ ಗರಿಗೆದರಿದೆ

. ರಾಜಕಾರಣಿಗಳ ಮತಬೇಟೆ, ಮತದಾರರ ಹಕ್ಕು ಚಲಾವಣೆಯ ನಡುವೆ,ಕ್ರಿಕೆಟಿಗರ ವಿಕೆಟ್ ಬೇಟೆ, ರನ್ ದಾಹ, ಸಿಕ್ಸರ್- ಬೌಂಡರಿಗಳ ಸಿರಿಮಳೆ ಸಾಗಲಿದೆ. ಕರೋನಾ ಭೀತಿಯನ್ನೆಲ್ಲ ನಿವಾರಿಸಿಕೊಂಡು ಐಪಿಎಲ್ ತನ್ನ 16ನೇ ಆವೃತ್ತಿಯಲ್ಲಿ ಮತ್ತೆ ಹಿಂದಿನ ಸ್ವರೂಪ, ಸಂಭ್ರಮ, ಶ್ರೀಮಂತಿಕೆಯಲ್ಲೇ ಮರಳುತ್ತಿದೆ. ಟೂರ್ನಿಯಲ್ಲಿ ಆಡುವ ಎಲ್ಲ 10 ತಂಡಗಳು ಮತ್ತೆ ತಮ್ಮ ತವರು ತಾಣಗಳಲ್ಲೇ ಲೀಗ್ ಪಂದ್ಯಗಳನ್ನು ಆಡುವ ಅವಕಾಶ ಪಡೆದುಕೊಂಡಿವೆ. ಪ್ರೇಕ್ಷಕರೂ ಮತ್ತೆ ಶೇಕಡ 100 ಪ್ರಮಾಣದಲ್ಲಿ ಕ್ರೀಡಾಂಗಣಕ್ಕೆ ಮರಳುವ ಅವಕಾಶ ಪಡೆದುಕೊಂಡಿದ್ದಾರೆ. ಟಿವಿ ಜತೆಗೆ ಓಟಿಟಿ ವೇದಿಕೆಯಲ್ಲೂ ಐಪಿಎಲ್ ಮನರಂಜನೆ ಕ್ರಿಕೆಟ್ ಪ್ರೇಮಿಗಳ ಮನೆ- ಮೊಬೈಲ್ ತಲುಪಲಿದೆ. ಕಳೆದ ಆವೃತ್ತಿಯಲ್ಲಿ ಎರಡು ಹೊಸ ತಂಡಗಳು ಸೇರಿರುವುದರಿಂದ ಐಪಿಎಲ್ ಕುಟುಂಬವೂ ದೊಡ್ಡದಾಗಿದೆ.
ತಂಡಗಳು:
ಮುಂಬೈ ಇಂಡಿಯನ್ಸ್, ಕೋಲ್ಕತ ನೈಟ್’ರೈಡರ್ಸ್, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಆರ್ ಸಿಬಿ, ಚೆನ್ನೈ ಸೂಪರ್ ಕಿಂಗ್ಸ್, ಲಖನೌ ಸೂಪರ್ ಜೈಂಟ್ಸ್ , ಪಂಜಾಬ್ ಕಿಂಗ್ಸ್ , ಗುಜರಾತ್ ಟೈಟಾನ್ಸ್ , ಸನ್’ರೈಸರ್ಸ್ ಹೈದರಾಬಾದ್

Related posts

ನ.21 : ವಿದ್ಯುತ್ ನಿಲುಗಡೆ

Suddi Udaya

ವೇಣೂರು ಕಾಲೇಜು ವಿದ್ಯಾರ್ಥಿನಿ ಅಸೌಖ್ಯದಿಂದ ನಿಧನ: ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ

Suddi Udaya

ರಕ್ತೇಶ್ವರಿ ಪದವು ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪೋಷಣಾ ಅಭಿಯಾನ

Suddi Udaya

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya
error: Content is protected !!