23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿರಾಜ್ಯ ಸುದ್ದಿ

ಇಂದಿನಿಂದ ಐಪಿಎಲ್ ಕ್ರಿಕೆಟ್ ಧಮಾಕಾ

ಬೆಳ್ತಂಗಡಿ: ವಿಶ್ವದ ಶ್ರೀಮಂತ ಕ್ರಿಕೆಟ್ ಟೂರ್ನಿ ಮತ್ತೆ ಬಂದಿದೆ. ರಾಜ್ಯದಲ್ಲಿ ಚುನಾವಣೆಯ ಬಿಸಿ ಏರಿರುವ ನಡುವೆ ದೇಶದ ಕ್ರಿಕೆಟ್ ಪ್ರೇಮಿಗಳಲ್ಲಿ ಐಪಿಎಲ್ ಕುತೂಹಲ ಗರಿಗೆದರಿದೆ

. ರಾಜಕಾರಣಿಗಳ ಮತಬೇಟೆ, ಮತದಾರರ ಹಕ್ಕು ಚಲಾವಣೆಯ ನಡುವೆ,ಕ್ರಿಕೆಟಿಗರ ವಿಕೆಟ್ ಬೇಟೆ, ರನ್ ದಾಹ, ಸಿಕ್ಸರ್- ಬೌಂಡರಿಗಳ ಸಿರಿಮಳೆ ಸಾಗಲಿದೆ. ಕರೋನಾ ಭೀತಿಯನ್ನೆಲ್ಲ ನಿವಾರಿಸಿಕೊಂಡು ಐಪಿಎಲ್ ತನ್ನ 16ನೇ ಆವೃತ್ತಿಯಲ್ಲಿ ಮತ್ತೆ ಹಿಂದಿನ ಸ್ವರೂಪ, ಸಂಭ್ರಮ, ಶ್ರೀಮಂತಿಕೆಯಲ್ಲೇ ಮರಳುತ್ತಿದೆ. ಟೂರ್ನಿಯಲ್ಲಿ ಆಡುವ ಎಲ್ಲ 10 ತಂಡಗಳು ಮತ್ತೆ ತಮ್ಮ ತವರು ತಾಣಗಳಲ್ಲೇ ಲೀಗ್ ಪಂದ್ಯಗಳನ್ನು ಆಡುವ ಅವಕಾಶ ಪಡೆದುಕೊಂಡಿವೆ. ಪ್ರೇಕ್ಷಕರೂ ಮತ್ತೆ ಶೇಕಡ 100 ಪ್ರಮಾಣದಲ್ಲಿ ಕ್ರೀಡಾಂಗಣಕ್ಕೆ ಮರಳುವ ಅವಕಾಶ ಪಡೆದುಕೊಂಡಿದ್ದಾರೆ. ಟಿವಿ ಜತೆಗೆ ಓಟಿಟಿ ವೇದಿಕೆಯಲ್ಲೂ ಐಪಿಎಲ್ ಮನರಂಜನೆ ಕ್ರಿಕೆಟ್ ಪ್ರೇಮಿಗಳ ಮನೆ- ಮೊಬೈಲ್ ತಲುಪಲಿದೆ. ಕಳೆದ ಆವೃತ್ತಿಯಲ್ಲಿ ಎರಡು ಹೊಸ ತಂಡಗಳು ಸೇರಿರುವುದರಿಂದ ಐಪಿಎಲ್ ಕುಟುಂಬವೂ ದೊಡ್ಡದಾಗಿದೆ.
ತಂಡಗಳು:
ಮುಂಬೈ ಇಂಡಿಯನ್ಸ್, ಕೋಲ್ಕತ ನೈಟ್’ರೈಡರ್ಸ್, ರಾಜಸ್ಥಾನ ರಾಯಲ್ಸ್, ಡೆಲ್ಲಿ ಕ್ಯಾಪಿಟಲ್ಸ್, ಆರ್ ಸಿಬಿ, ಚೆನ್ನೈ ಸೂಪರ್ ಕಿಂಗ್ಸ್, ಲಖನೌ ಸೂಪರ್ ಜೈಂಟ್ಸ್ , ಪಂಜಾಬ್ ಕಿಂಗ್ಸ್ , ಗುಜರಾತ್ ಟೈಟಾನ್ಸ್ , ಸನ್’ರೈಸರ್ಸ್ ಹೈದರಾಬಾದ್

Related posts

ಫೆ.3: ಬೆಳ್ತಂಗಡಿ ಆರ್.ಜೆ. ಫ್ರೆಂಡ್ಸ್ ಕ್ಲಬ್ ಕಲ್ಲಗುಡ್ಡೆ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಬಜಿರೆ-ಹೊಸಪಟ್ಣದಲ್ಲಿ ಹೊನಲು ಬೆಳಕಿನ ಪುರುಷರ 60ಕೆ.ಜಿ ವಿಭಾಗದ ಮ್ಯಾಟ್ ಕಬಡ್ಡಿ ಪಂದ್ಯಾಟ ಉದ್ಘಾಟನೆ

Suddi Udaya

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!