23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಮಾ.27ರಿಂದ ನಾಲ್ಕು ದಿನಗಳ ಬೇಸಿಗೆ ಶಿಬಿರವು ನಡೆಯಿತು. ಬೇಸಿಗೆ ಶಿಬಿರದ ಉದ್ಘಾಟಕರಾಗಿ ಮಕ್ಕಳ ಹಕ್ಕುಗಳ ಸಮನ್ವಯ ಅಧಿಕಾರಿಯಾದ ವಿನೋದ್ ಕಲ್ಲಾಜೆ ಆಗಮಿಸಿದ್ದರು.


ಮುಖ್ಯ ಅಭ್ಯಂಗತರಾಗಿ ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಯ ಕಲಾ ಶಿಕ್ಷಕರಾದ ಸುಂದರ್ ನಾಯ್ಕ್ , ಶ್ರೀಮತಿ ಪೈ ಹಾಗೂ ರಜನಿ ಕಾಮತ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆ ಯಲ್ಲಿ ಉಪಸ್ಥಿತರಿದ್ದರು..
ವಿದ್ಯಾರ್ಥಿಗಳಿಗೆ ಅಜ್ಜಿ ಕಥೆ ,ಬಾಲಗೀತೆ ,ಕ್ರಾಫ್ಟ್ ವರ್ಕ್, ಗಳು ಬೆಂಕಿ ರಹಿತ ಆಹಾರ ಪದಾರ್ಥಗಳು, ಮೆಹಂದಿ, ಹೇರ್ ಸ್ಟೈಲ್, ಫೇಶಿಯಲ್, ಎಂಬ್ರಾಯಿಡರ್ ವಕ್೯, ಕಸೂತಿ, ವಿದ್ಯುತ್ ಉಪಕರಣಗಳ ಬಳಕೆ ಮತ್ತು ಜಾಗ್ರತಿ, ನಾಯಕತ್ವದ ಬಗ್ಗೆ ಅರಿವು, ಇತ್ಯಾದಿಗಳ ಬಗ್ಗೆ ತರಬೇತಿ ನೀಡಲಾಯಿತು.
ಸಮಾರೋಪ ಸಮಾರಂಭದಲ್ಲಿ ಸ್ಮೀತೇಶ್ ಬಾರ್ಯ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಬೇಸಿಗೆ ಶಿಬಿರದಲ್ಲಿ ನಡೆದಂತಹ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಕ್ಕಳ ಮುಂದಿನ ಜೀವನ ಶೈಲಿಯಲ್ಲಿ ಏಕಾಗ್ರತೆ ,ಶಿಸ್ತು , ತಾಳ್ಮೆ ಆಲಿಸುವಿಕೆ ಯಾವ ರೀತಿ ಬೆಳೆಸಬೇಕು ಗುರು ಹಿರಿಯರನ್ನು ಹೇಗೆ ಸ್ಮರಿಸಬೇಕು ಎಂಬುದನ್ನು ಮಕ್ಕಳಿಗೆ ತಿಳಿಸಿದರು.
ಸಮಾರೋಪದ ಉಪಸ್ಥಿತಿಯಲ್ಲಿ ಸಹನ ಜೈನ್ ಹರ್ಬಲ್ ಬ್ಯೂಟಿಷಿಯನ್, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿ ಕುಮಾರಿ ಅನುಶ್ರೀ ಕಾರ್ಯಕ್ರಮವನ್ನು ನಿರೂಪಿಸಿ , ವಿದ್ಯಾರ್ಥಿಯ ಯಶ್ವಿತ ಸ್ವಾಗತಿಸಿ ,ವಿದ್ಯಾರ್ಥಿ ಕುಮಾರಿ ಪ್ರಾಪ್ತಿ ವಂದಿಸಿದರು. ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಶಿಶಿಲ: ಮತ್ಸ್ಯತೀರ್ಥ ಮನೆ ನಿವಾಸಿ ಪುರುಷೋತ್ತಮ ರಾವ್ ನಿಧನ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪಟ್ರಮೆ ಅನಾರು ಬೂತ್‌ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಆ.2 : ವೇಣೂರು ವಿದ್ಯುತ್ ನಿಲುಗಡೆ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
error: Content is protected !!