September 6, 2026
ಸಾಧಕರು

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ಅಭಿನಂದನಾ ಸಮಾರಂಭ ಮಾ.31ರಂದು ಸಂಜೆ ಕುತ್ಯಾರು ದೇವಸ್ಥಾನದ ವಠಾರದಲ್ಲಿ ಜರುಗಿತು.

ಮಾಜಿ ಸೈನಿಕರ ಸಂಘ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ, ಕರಾಡ್ಹ ಬ್ರಾಹ್ಮಣ ಸಮಾಜ ಬೆಳ್ತಂಗಡಿ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ, ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಸಭಾ, ಕೂಟ ಜಗತತು ಸಾಲಿಗ್ರಾಮ ಅಂಗ ಸಂಸ್ಥೆ ಬೆಳ್ತಂಗಡಿ, ಚಿತ್ಪಾವನ ಸಂಘಟನೆ ಮುಂಡಾಜೆ, ತುಳು ಶಿವಳ್ಳಿ ಸಭಾ ಉಜಿರೆ, ಉಪ್ಪಿನಂಗಡಿ ಹವ್ಯಕ

ಮಂಡಲ ಉಜಿರ ವಲಯ, ಭಿಡೆ ಕುಟುಂಬಸ್ಥರು, ವರ್ತಕರು ಬೆಳ್ತಂಗಡಿ ಇವರು ನಿವೃತ್ತ ಕರ್ನಲ್ ನಿತಿನ್ ಆರ್. ಭಿಡೆಯವರನ್ನು ಹೂ ಹಾರ ಹಾಕಿ ಗೌರವಿಸಿದರು. ನಿತಿನ್ ಆರ್. ಭಿಡೆಯವರು ತನ್ನ ಸೇವಾ ಅವಧಿಯ ಅನುಭವಗಳ ಬಗ್ಗೆ ಮಾತನಾಡಿ, ಸೈನಿಕರಿಗೆ ದೇಶದ ರಕ್ಷಣೆಯೇ ಮುಖ್ಯ ಧ್ಯೇಯವಾಗಿದ್ದು, ಭಾರತ ಮಾತೆಯ ಸೇವೆ ಜೀವನದಲ್ಲಿ ದೊರೆತ ಪುಣ್ಯ ಕಾರ್ಯವಾಗಿದೆ ಎಂದು ಹೇಳಿ, ಅಭಿನಂದಿಸಿದ ಎಲ್ಲಾ ಸಂಘ – ಸಂಸ್ಥೆಯವರಿಗೆ ಕೃತಜ್ಞತೆ ಸಲ್ಲಿಸಿದರು. ಬಾಲಕೃಷ್ಣ ಸಹಸ್ರಬುದ್ಯೆ ದೇಶ ಭಕ್ತಿ

ಹಾಡಿದರು. ಬೆಳ್ತಂಗಡಿ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ ಸ್ವಾಗತಿಸಿದರು. ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಕಾರ್ಯಕ್ರಮ ನಿರೂಪಿಸಿ, ಯೋಗೀಶ್ ಭಿಡೆ ವಂದಿಸಿದರು. ಮೇ|ಜ| ಎಂ.ವಿ ಭಟ್ ಸೇರಿದಂತೆ ನಿವೃತ್ತ ಸೈನಿಕರ ಸಂಘದ ಪದಾಧಿಕಾರಿ, ವಿವಿಧ ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

Related posts

ಅತ್ಯುನ್ನತ ಸೇವೆಗಾಗಿ ಹೆಡ್ ಕಾನ್ ಸ್ಟೇಬಲ್ ಬಿ. ವಿಜಯ್ ಕುಮಾ‌ರ್ ರಿಗೆ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ

Suddi Udaya

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

Suddi Udaya

ಎಕ್ಸೆಲ್ ನ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ವೈದ್ಯಕೀಯ ನಿರ್ದೇಶಕಡಾ.ಮುರಳಿಕೃಷ್ಣ ಇರ್ವತ್ರಾಯರಿಗೆ”ವಿಕ ಹಿರೋಸ್” ಪ್ರಶಸ್ತಿ

Suddi Udaya
error: Content is protected !!