23.7 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ವಿವಿಧ ಸಂಘ-ಸಂಸ್ಥೆಗಳಿಂದ ಅಭಿನಂದನೆ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 32 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಕರ್ನಲ್ ನಿತಿನ್ ಆರ್. ಭಿಡೆಯವರಿಗೆ ಅಭಿನಂದನಾ ಸಮಾರಂಭ ಮಾ.31ರಂದು ಸಂಜೆ ಕುತ್ಯಾರು ದೇವಸ್ಥಾನದ ವಠಾರದಲ್ಲಿ ಜರುಗಿತು.

ಮಾಜಿ ಸೈನಿಕರ ಸಂಘ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ, ಕರಾಡ್ಹ ಬ್ರಾಹ್ಮಣ ಸಮಾಜ ಬೆಳ್ತಂಗಡಿ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ, ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಬ್ರಾಹ್ಮಣ ಸಭಾ, ಕೂಟ ಜಗತತು ಸಾಲಿಗ್ರಾಮ ಅಂಗ ಸಂಸ್ಥೆ ಬೆಳ್ತಂಗಡಿ, ಚಿತ್ಪಾವನ ಸಂಘಟನೆ ಮುಂಡಾಜೆ, ತುಳು ಶಿವಳ್ಳಿ ಸಭಾ ಉಜಿರೆ, ಉಪ್ಪಿನಂಗಡಿ ಹವ್ಯಕ

ಮಂಡಲ ಉಜಿರ ವಲಯ, ಭಿಡೆ ಕುಟುಂಬಸ್ಥರು, ವರ್ತಕರು ಬೆಳ್ತಂಗಡಿ ಇವರು ನಿವೃತ್ತ ಕರ್ನಲ್ ನಿತಿನ್ ಆರ್. ಭಿಡೆಯವರನ್ನು ಹೂ ಹಾರ ಹಾಕಿ ಗೌರವಿಸಿದರು. ನಿತಿನ್ ಆರ್. ಭಿಡೆಯವರು ತನ್ನ ಸೇವಾ ಅವಧಿಯ ಅನುಭವಗಳ ಬಗ್ಗೆ ಮಾತನಾಡಿ, ಸೈನಿಕರಿಗೆ ದೇಶದ ರಕ್ಷಣೆಯೇ ಮುಖ್ಯ ಧ್ಯೇಯವಾಗಿದ್ದು, ಭಾರತ ಮಾತೆಯ ಸೇವೆ ಜೀವನದಲ್ಲಿ ದೊರೆತ ಪುಣ್ಯ ಕಾರ್ಯವಾಗಿದೆ ಎಂದು ಹೇಳಿ, ಅಭಿನಂದಿಸಿದ ಎಲ್ಲಾ ಸಂಘ – ಸಂಸ್ಥೆಯವರಿಗೆ ಕೃತಜ್ಞತೆ ಸಲ್ಲಿಸಿದರು. ಬಾಲಕೃಷ್ಣ ಸಹಸ್ರಬುದ್ಯೆ ದೇಶ ಭಕ್ತಿ

ಹಾಡಿದರು. ಬೆಳ್ತಂಗಡಿ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ ಸ್ವಾಗತಿಸಿದರು. ನಾವೂರು ಆರೋಗ್ಯ ಕ್ಲಿನಿಕ್ ಡಾ. ಪ್ರದೀಪ್ ಕಾರ್ಯಕ್ರಮ ನಿರೂಪಿಸಿ, ಯೋಗೀಶ್ ಭಿಡೆ ವಂದಿಸಿದರು. ಮೇ|ಜ| ಎಂ.ವಿ ಭಟ್ ಸೇರಿದಂತೆ ನಿವೃತ್ತ ಸೈನಿಕರ ಸಂಘದ ಪದಾಧಿಕಾರಿ, ವಿವಿಧ ಸಂಘಟನೆಗಳ ಮುಖ್ಯಸ್ಥರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.

Related posts

ಅಧ್ಯಾಪಕ ಶಂಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಕಳೆದ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಮೆಚ್ಚುಗೆ ಗಳಿಸಿದ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ಅವರಿಗೆ ಗೌರವ ಸನ್ಮಾನ

Suddi Udaya

ಗೇರುಕಟ್ಟೆಯ ರಾಮಪ್ರಕಾಶ ಕಲ್ಲೂರಾಯರಿಗೆ ಶ್ರೀನಿಧಿ ಆಸ್ರಣ್ಣ ಪ್ರಶಸ್ತಿ.

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ರಾಜ್ಯಪ್ರಶಸ್ತಿಗೆ ಅರ್ಜಿ ಆಹ್ವಾನ

Suddi Udaya
error: Content is protected !!