September 6, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ನಿಡ್ಲೆ: ನಾಟಿ ವೈದ್ಯ ಬಾಬು ನಿಧನ

Suddi Udaya

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಅಕ್ರಮವಾಗಿ ದಾಸ್ತಾನು ಮಾಡಿದ್ದ ಡಿಸೇಲ್ ಪತ್ತೆ: ಬೆಳ್ತಂಗಡಿ ಡಿವೈಎಸ್ಪಿ ನೇತೃತ್ವದಲ್ಲಿ ಕಾರ್ಯಾಚರಣೆ

Suddi Udaya

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
error: Content is protected !!