April 2, 2025
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ಪ್ರಕೃತಿಯ ವಿಸ್ಮಯ: ತೊತಪುರಿ ಮಾವಿನ ಕಾಯಿಯಂತೆ ಕಂಡು ಬಂದ ಪಪ್ಪಾಯಿ ಹಣ್ಣು

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಕಡಿರುದ್ಯಾವರ : ಕುಕ್ಕಾವು ಶಾಲೆಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಬಟ್ಟಲು ವಿತರಣೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya

ಮಾಲಾಡಿ: ಕೊಲ್ಪದಬೈಲುನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರು

Suddi Udaya
error: Content is protected !!