22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ತಾಲ್ಲೂಕು ಮಟ್ಟದ ಹಗ್ಗಜಗ್ಗಾಟ ಸ್ಪರ್ಧೆ: ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ದೇಶದ ಪ್ರಧಾನಿ ಶ್ರೀ ನರೇಂದ್ರ ಮೋದಿಜಿಯವರ ವಿರುಧ್ಧ ಅವಹೇಳನಕಾರಿ ಹೇಳಿಕೆ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವಿರುಧ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವಂತೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya

ಆ. 12: ಪ್ರಾಥಮಿಕ ಶಾಲಾ ಶಿಕ್ಷಕರಿಂದ ಬೆಂಗಳೂರು ಚಲೋ: ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಹಸೀಲ್ದಾರ್ ಮತ್ತು ಶಾಸಕರು, ವಿಧಾನಪರಿಷತ್ ಸದಸ್ಯರ ಮೂಲಕ ಸರಕಾರಕ್ಕೆ ಮನವಿ

Suddi Udaya
error: Content is protected !!