ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

Updated on:

ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್

ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನು
ಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣ
ಮಾ. 31 ರಂದು ವರದಿಯಾಗಿದೆ.

ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು ರೂ.3,240 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Leave a Comment

error: Content is protected !!