22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್

ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನು
ಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣ
ಮಾ. 31 ರಂದು ವರದಿಯಾಗಿದೆ.

ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು ರೂ.3,240 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿಯ ಪ್ರತಿಷ್ಠಿತ ಕೇದೆ ಗುತ್ತಿನ ಮನೆಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya
error: Content is protected !!