27.9 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಭಾರೀ ಮಳೆ ಹಿನ್ನೆಲೆ: ಇಂದು (ಮೇ 30) ದ.ಕ.ಜಿಲ್ಲೆಯ ಶಾಲೆಗಳಿಗೆ ರಜೆಘೋಷಣೆ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಇಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya
error: Content is protected !!