22.6 C
ಪುತ್ತೂರು, ಬೆಳ್ತಂಗಡಿ
July 23, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ಎಸ್ ಡಿ ಎಮ್ ‌ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಸೈಬರ್ ಭದ್ರತೆ ಕುರಿತು ಉಪನ್ಯಾಸ

Suddi Udaya

ಪುಂಜಾಲಕಟ್ಟೆಯಲ್ಲಿ ಜನಔಷಧಿ ಕೇಂದ್ರ ಶುಭಾರಂಭ

Suddi Udaya

ಬೆಳ್ತಂಗಡಿ: 1867 ಮದ್ಯವರ್ಜನ ಶಿಬಿರ ಉದ್ಘಾಟನಾ ಕಾರ್ಯಕ್ರಮ

Suddi Udaya

ಕಥೊಲಿಕ್ ಕ್ರೆಡಿಟ್ ಸಹಕಾರಿ ಸಂಘದ ಬೆಳ್ಳಿ ಹಬ್ಬ ಸಮಾರೋಪ ಸಮಾರಂಭ

Suddi Udaya

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ಕಳೆಂಜ: ನಂದಗೋಕುಲ ದೀಪೋತ್ಸವ ಕಾರ್ಯಕ್ರಮ ಮುಂದೂಡಿಕೆ

Suddi Udaya
error: Content is protected !!