23.5 C
ಪುತ್ತೂರು, ಬೆಳ್ತಂಗಡಿ
June 8, 2026
ಪ್ರಮುಖ ಸುದ್ದಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಅಂಚೆ ಕಛೇರಿ ಉಳಿತಾಯ ಯೋಜನೆಗಳ ಬಡ್ಡಿ ದರದಲ್ಲಿ ಏರಿಕೆ

ಏಪ್ರಿಲ್-ಜೂನ್ ತ್ರೈಮಾಸಿಕ ಅಂಚೆ ಕಛೇರಿಯ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರವನ್ನು ಶೇ.0.7 ರವರೆಗೆ ಏರಿಸಿ ಕೇಂದ್ರ ಸರಕಾರ ಮಾ.31 ರಂದು ಆದೇಶ ಹೊರಡಿಸಿದೆ.

ಪಿಪಿಎಫ್ ಮತ್ತು ಉಳಿತಾಯ ಠೇವಣಿಗಳ ಬಡ್ಡಿಯನ್ನು ಶೇ.7.1 ಹಾಗೂ ಶೇ.4ರಲ್ಲೇ ಉಳಿಸಿಕೊಳ್ಳಲಾಗಿದೆ. ಇತರ ಉಳಿತಾಯ ಯೋಜನೆಗಳ ಬಡ್ಡಿ ದರಗಳನ್ನು ಶೇ.0.1 ರಿಂದ ಶೇ. 0.7 ರವರೆಗೆ ಏರಿಸಲಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ. ಏ.1 ರಿಂದ ಜೂ.30 ರವರೆಗೆ ಈ ಏರಿಕೆಗಳು ಅನ್ವಯವಾಗಿತ್ತದೆ. ರಾಷ್ಟ್ರೀಯ ುಳಿತಾಯ ಸರ್ಟಿಫಿಕೆಟ್ (ಎನ್ ಎಸ್ ಸಿ) ಬಡ್ಡಿಯನ್ನು ಈಗಿನ ಶೇ.7 ರಿಂದ ಶೇ.7.5 ಕ್ಕೆ ಏರಿಸಲಾಗಿದೆ. ಬಡ್ಡಿ ದರಗಳನ್ನು 3 ತಿಂಗಳಿಗೊಮ್ಮೆ ಪರಿಷ್ಕರಿಸಲಾಗುವುದು.

ಸುಕನ್ಯಾ ಸಮೃದ್ಧಿ ಯೋಜನೆಯ ಬಡ್ಡಿ ಶೇ.7.6 ರಿಂದ ಶೇ.8ಕ್ಕೆ ಏರಿದೆ. ಹಿರಿಯ ನಾಗರಿಕರ ಉಳಿತಾಯ ಬಡ್ಡಿ ದರ ಶೇ.8 ರಿಂದ ಶೇ.8.2 ಮತ್ತು ಕಿಸಾನ್ ವಿಕಾಸದ ಪತ್ರದ ಮೇಲಿನ ಬಡ್ಡಿ ಶೇ.7.2 ರಿಂದ ಶೇ.7.6ಕ್ಕೆ ಏರಿಕೆಯಾಗಿದೆ.

Related posts

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಭೇಟಿ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ವೇಣೂರು: ಕರಿಮಣೇಲು ದಡ್ಡು ಫಾರ್ಮ್ಸನ ಬಾಲಕೃಷ್ಣ ಭಟ್ ನಿಧನ

Suddi Udaya

ಬಾಂಜಾರು ಮಲೆ ಮಲೆಕುಡಿಯರ ಜಮೀನು ಸಮಸ್ಯೆ : ವಿಧಾನ ಪರಿಷತ್ ನಲ್ಲಿ ಸರಕಾರದ ಗಮನ ಸೆಳೆದ ಬಿ.ಕೆ ಹರಿ ಪ್ರಸಾದ್‌: ಶೇಖರ್ ಲಾಯಿಲ ನೀಡಿದ ಮನವಿಗೆ ಸ್ಪಂದನೆ

Suddi Udaya

ಮಾಲಾಡಿ: ಕಾರು ಮತ್ತು ಬೈಕ್ ನಡುವೆ ಅಪಘಾತ : ಬೈಕ್ ಸವಾರನಿಗೆ ಗಾಯ

Suddi Udaya
error: Content is protected !!