September 6, 2026
ತಾಲೂಕು ಸುದ್ದಿಸಾಧಕರು

ಕೃಷಿ ಕ್ಷೇತ್ರ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳಲ್ಲಿ ವಿಶೇಷ ಸಾಧನೆ : ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಗೌರವ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಭಾರತೀಯ ಭೂ ಸೇನೆಯಲ್ಲಿ 18 ವಷ೯ ಯೋಧರಾಗಿ ದೇಶ ರಕ್ಷಣೆ ಯ ಕಾಯ೯ಮಾಡಿ ನಿವೃತ್ತರಾಗಿರುವ ಗೋಪಾಲಕೃಷ್ಣ ಕಾಂಚೋಡು ಅವರು ಕೃಷಿ ಕ್ಷೇತ್ರದಲ್ಲಿ ಮಾಡಿದ ಸಾಧನೆ ಹಾಗೂ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ಗುರುತಿಸಿ, ಏಷ್ಯಾ ವೇದಿಕ್ ಕಲ್ಚರಲ್ ಅಕಾಡೆಮಿ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಏಷ್ಯಾ ವೇದಿಕ್ ಕಲ್ಚರ್ ಪೌಂಡೇಶನ್ ವತಿಯಿಂದ
ಏಷ್ಯಾ ವೇದಿಕ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ ಪ್ರತಿ ವರ್ಷ ನಡೆಯುವ ಈ ಗೌರವ ಪ್ರಶಸ್ತಿಗೆ ಈ ವಷ೯ ಗೋಪಾಲಕೃಷ್ಣ ಕಾಂಚೋಡು ಅವರು ಪಾತ್ರರಾಗಿದ್ದಾರೆ.
ಇತ್ತೀಚೆಗಷ್ಟೇ ಇವರು ಕೇಂದ್ರ ಹಾಗೂ ರಾಜ್ಯ ಸರ್ಕಾರ ಕೊಡಮಾಡುವ ಪ್ರತಿಷ್ಠಿತ
ಜೈ ಜವಾನ್ ಜೈ ಕಿಸಾನ್ “ಕೃಷಿಕ ರತ್ನ” ಪ್ರಶಸ್ತಿ ಗೆ ಆಯ್ಕೆ ಯಾಗಿ, ಮಾ.15ರಂದು ಬೆಂಗಳೂರಿನ
ಟೌನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ,
ವಿಧಾನ‌ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಅವರಿಂದ ಪುರಸ್ಕೃತ ಗೊಂಡಿದ್ದರು.
ಗೋಪಾಲಕೃಷ್ಣ ಕಾಂಚೋಡು ಅವರು ಭಾರತೀಯ ಭೂ ಸೇನೆಯಲ್ಲಿ ಜಮ್ಮು ಕಾಶ್ಮೀರ ಸೇರಿದಂತೆ ದೇಶದ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತರಾದವರು.‌
ಸೇನಾ ನಿವೃತ್ತಿಯ ನಂತರ ತನ್ನೂರಿಗೆ ಬಂದು ಬೆಳ್ತಂಗಡಿ ತಾಲೂಕು ಉಜಿರೆ ಯಲ್ಲಿ ನೆಲೆಸಿ, “ರವಿ ಟ್ರೇಡರ್ಸ್” ಎಂಬ ಉದ್ದಿಮೆ ಸ್ಥಾಪಿಸಿ ಹತ್ತಾರು ಯುವಕರಿಗೆ ಜೀವನೋಪಾಯದ ಹಾದಿಯನ್ನು ಸೃಷ್ಟಿಸುತ್ತಾ ಸೇನೆಗೆ ಸೇರಲು ಬಯಸುವ ಯುವಕರಿಗೆ ಉಚಿತ ಮಾಹಿತಿ ನೀಡುತ್ತಾ ಬರುತ್ತಿದ್ದಾರೆ.
ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಾ, ಕೃಷಿ ಕ್ಷೇತ್ರ ದಲ್ಲಿ ವೈಜ್ಞಾನಿಕವಾಗಿ, ಉತ್ತಮ ಆದಾಯ ಪಡೆಯುವ ಆಧುನಿಕ ತಂತ್ರಜ್ಞಾನ ಗಳೊಂದಿಗೆ ಪ್ರಕೃತಿಗೆ ತೊಂದರೆ ಯಾಗದಂತೆ (ಜಲ, ನೆಲ ಉಳಿಸಿ ) ಸಾವಯವ ಕೃಷಿಯನ್ನು ಮಾಡುತ್ತಾ, ಕಂಗು, ತೆಂಗು, ಬಾಳೆ ಕೃಷಿಗಳೊಂದಿಗೆ ಎಲ್ಹೋಟಿಕ್ (exotic) ಹಣ್ಣುಗಳನ್ನು ಬೆಳೆಯುತ್ತಾ, ಪ್ರಾಕೃತಿಕವಾಗಿ ಪ್ರಕೃತಿ ಸಹಜಕ್ರಿಯೆ, ಪರಾಗ ಸ್ಪರ್ಶಕ್ಕೆ ಪೂರಕ ಜೇನುಸಾಕಣೆ ಮಾಡುತ್ತಾ ಹತ್ತು ಹಲವು ಆಸಕ್ತ ಕೃಷಿಕರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಜೊತೆಗೆ ಸಾಮಾಜಿಕ ಸೇವಾ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ.
ಅವರ ಸಾಧನೆಯನ್ನು ಗುರುತಿಸಿ ಏಷ್ಯಾ ವೇದಿಕ್ ಕಲ್ಚರಲ್ ಅಕಾಡೆಮಿ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.

Related posts

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಜನಾರ್ದನ ದೇವಸ್ಥಾನದ ನೂತನ ವಿಜಯಗೋಪುರ ಲೋಕಾರ್ಪಣೆ

Suddi Udaya

ಧರ್ಮಸ್ಥಳದಲ್ಲಿ ರಾಜ್ಯಾದ್ಯಂತ ಶುದ್ಧಗಂಗಾ ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರೇರಕರಿಗೆ ಮಾರ್ಗದರ್ಶನ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!