25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ ಕಳ್ಳಭಟ್ಟಿ ಸಾರಾಯಿ ಹಾಗೂ ಪರಿಕರಣಗಳನ್ನು ವಶಪಡಿಸಿಕೊಂಡ ಪ್ರಕರಣಮಾ. 31 ರಂದು ವರದಿಯಾಗಿದೆ.

ಆರೋಪಿ ಕೋಟಿಯ್ಯಪ್ಪ ‌ಸ್ಥಳದಿಂದ ಪರಾರಿಯಾಗಿದ್ದು, ಅಬಕಾರಿ ನಿರೀಕ್ಷಕರು ಕೇಸ್ ದಾಖಲಿಸಿರುತ್ತಾರೆ. ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಕಳ್ಳಭಟ್ಟಿ ಸಾರಾಯಿಯನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು 5,200 ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಉಜಿರೆ: ಅನುಗ್ರಹ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಅನುಗ್ರಹ ಶಾಲೆಯಲ್ಲಿ ಸಂಭ್ರಮದ ಗಣರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಅಂಡೆತಡ್ಕ : ಕರಾಯ ಕ್ಲಸ್ಟರ್ ಮಟ್ಟದ ಪ್ರಾಥಮಿಕ ಶಾಲಾ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಬಜಿರೆ: ಬೆಳ್ತಂಗಡಿ ತಾ| ಮಟ್ಟದ ಕ್ರೀಡಾಕೂಟದ ಉದ್ಘಾಟನೆ: ಹುಣ್ಸೆಕಟ್ಟೆ ಕ್ರೀಡಾ ಸಂಕೀರ್ಣಕ್ಕೆ ಸರಕಾರ ಅನುಮೋದನೆ ನೀಡಲಿ: ಶಾಸಕ ಹರೀಶ್ ಪೂಂಜ

Suddi Udaya
error: Content is protected !!