ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆ ಸಂಕೇಶದಲ್ಲಿ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮ ಕಳ್ಳಭಟ್ಟಿ ಸಾರಾಯಿ ತಯಾರಿಕಾ ಅಡ್ಡೆ- ಅಬಕಾರಿ ಇಲಾಖೆಯಿಂದ ದಾಳಿ ಆರೋಪಿ ಪರಾರಿ ಸೊತ್ತುಗಳು ವಶ

ಬೆಳ್ತಂಗಡಿ: ಪಟ್ರಮೆ ಗ್ರಾಮದ ಸಂಕೇಶ ಎಂಬಲ್ಲಿ ಕೋಟಿಯ್ಯಪ್ಪ ಎಂಬಾತ ತನ್ನ ವಾಸದ ಮನೆಯ ಹಿಂಬದಿಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿ ಮಾರಾಟದ ಉದ್ದೇಶಕ್ಕಾಗಿ ತಯಾರಿಸುತ್ತಿರುವ ಮಾಹಿತಿ ಪಡೆದ ಅಬಕಾರಿ ಇಲಾಖೆ ದಾಳಿ ನಡೆಸಿ 5 ಲೀ ಕಳ್ಳಭಟ್ಟಿ ಸಾರಾಯಿ ಹಾಗೂ ಪರಿಕರಣಗಳನ್ನು ವಶಪಡಿಸಿಕೊಂಡ ಪ್ರಕರಣಮಾ. 31 ರಂದು ವರದಿಯಾಗಿದೆ.

ಆರೋಪಿ ಕೋಟಿಯ್ಯಪ್ಪ ‌ಸ್ಥಳದಿಂದ ಪರಾರಿಯಾಗಿದ್ದು, ಅಬಕಾರಿ ನಿರೀಕ್ಷಕರು ಕೇಸ್ ದಾಖಲಿಸಿರುತ್ತಾರೆ. ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಕಳ್ಳಭಟ್ಟಿ ಸಾರಾಯಿಯನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು 5,200 ಎಂದು ಅಂದಾಜಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಚ್ಚಿರೆ ಬಜ್ಜೈ ವಾಟ್ಸಾಪ್ ಗ್ರೂಪ್ ಸ್ನೇಹ ಸಮ್ಮಿಲನ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

Suddi Udaya

ಕೃಷಿ ಪಂಪುಗಳ ಸ್ಥಾವರಗಳಿಗೆ ಆಧಾರ್ ಜೋಡಣೆ ಹಿನ್ನಲೆ ಸರಕಾರಿ ರಜಾ ದಿನವಾದ ಆ.24,25 ರಂದು ಬೆಳ್ತಂಗಡಿ ಮೆಸ್ಕಾಂ ಕಛೇರಿ ಕಾರ್ಯನಿರ್ವಹಿಸಲಿದೆ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
error: Content is protected !!