27.8 C
ಪುತ್ತೂರು, ಬೆಳ್ತಂಗಡಿ
May 22, 2025
ಅಪರಾಧ ಸುದ್ದಿ

ಪಡಂಗಡಿ ಪುತ್ಯೆಯಲ್ಲಿವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ,ಕಾಲುಗ ಳನ್ನು ಕಟ್ಟಿ , ಮೊಬೈಲ್ ನ್ನು ಕಿತ್ತು ಕೊಂಡು, ಪಿನ್ ನಂಬರ್ ಪಡೆದು ರೂ. 82 ಸಾವಿರ ಖಾತೆಯಿಂದ ವಗಾ೯ಯಿಸಿ ವಂಚನೆ

ಪಡಂಗಡಿ : ಇಲ್ಲಿನ ಜಾನೆಬೈಲು ಪುತ್ಯೆಎಂಬಲ್ಲಿ ವ್ಯಕ್ತಿಯೊಬ್ಬರಿಗೆ ಇಬ್ಬರುಹಲ್ಲೆ ನಡೆಸಿ,ಕಾಲುಗಳನ್ನು ಲುಂಗಿಯಿಂದ ಕಟ್ಟಿ , ಮೊಬೈಲ್ ನ್ನು ಕಿತ್ತು ಕೊಂಡು, ಪಿನ್ ನಂಬರ್ ಪಡೆದು ರೂ. 82 ಸಾವಿರ ಖಾತೆಯಿಂದ ವಗಾ೯ಯಿಸಿ, ಅಂಗಳದಲ್ಲಿ ನಿಲ್ಲಿಸಿದ ರೂ 2. 82 ಲಕ್ಷ ಬೆಲೆಬಾಳುವ ಇಲೆಕ್ಟ್ರಿಕ್ ತ್ರಿಚಕ್ರ ವಾಹನ ಸಹಿತ ಪರಾರಿಯಾಗಿರುವ‌ ಬಗ್ಗೆ ಮಾ. 30ರಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಡಂಗಡಿ ಗ್ರಾಮದ ಮುಕ್ತಿದಾಮ ಜಾನೆಬೈಲು ಪುತ್ಯೆಮನೆ ನಿವಾಸಿ ಗೋವಿಯಸ್ (64 ವರ್ಷ) ರವರು ನೀಡಿದ ದೂರಿನಂತೆ ರಿಯಾಜ್ ಮತ್ತು ಪೈಝಲ್ ಎಂಬವರ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಠಾಣೆ ಅಕ್ರ ನಂ 20/2023 ಕಲಂ; 324, 506, 394 ಐಪಿಸಿ. ಯಂತೆ ಪ್ರಕರಣ ದಾಖಲಾಗಿದೆ.

ಮಾ.30 ರಂದು ರಾತ್ರಿ ಸಮಯ 8 ಗಂಟೆಗೆ ಪಡಂಗಡಿ ಗ್ರಾಮದ ಜಾನೆಬೈಲು ಪುತ್ಯೆ ಮನೆಯ ಬಳಿ ಇರುವ ರಬ್ಬರ್ ಪ್ರೊಸಸಿಂಗ್ ಶೆಡ್ ಬಳಿ ಮಗನಾದ ಐಸಾಕ್ ಅಲೈಸ್ ಗೋವಿಯಸ್ ಜೊತೆ ಮೊಬೈಲ್ ಪೋನಿನಲ್ಲಿ ಮಾತನಾಡುತ್ತಿರುವ ಸಮಯ ತನ್ನ ಬಳಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿದ್ದ ಪರಿಚಯದ ರಿಯಾಜ್ ಮತ್ತು ಪೈಝಲ್ ಎಂಬವರು ಬಂದು ಕಟ್ಟಿಗೆ ಕೋಲಿನಿಂದ ಹಲ್ಲೆ ನಡೆಸಿ
ಕೆಳಗಡೆ ಬಿದ್ದ ನನ್ನ ಕಾಲುಗಳನ್ನು ಲುಂಗಿಯಿಂದ ಕಟ್ಟಿ ರಿಯಾಜ್ ಕೈಯಲ್ಲಿದ್ದ ಮೊಬೈಲ್ ನ್ನು ಎಳೆದಾಗ ಪೈಝಲ್ ಆತನಲ್ಲಿದ್ದ ಶಾಲಿನಿಂದ ಕುತ್ತಿಗೆಗೆ ಬಿಗಿದು ಗೂಗಲ್ ಪಿನ್ ಹೇಳಿ ಎಂದು ಬೆದರಿಸಿ ಪಿನ್ ನಂಬ್ರ ಪಡೆದು ರೂ 82,000/- ರೂ ವನ್ನು ಅವರ ಹೆಂಡ್ತಿಯರ ಹೆಸರಿನ ಖಾತೆಗೆ ವರ್ಗಾಯಿಸಿ ಮೊಬೈಲ್ ನ್ನು ಮತ್ತು ಅಂಗಳದಲ್ಲಿ ನಿಲ್ಲಿಸಿದ ರೂ 2.82ಲಕ್ಷ ಬೆಲೆಬಾಳುವ ಮಹೀಂದ್ರಾ ಇಲೆಕ್ಟ್ರಿಕ್ ಮೊಬಾಲಿಟಿ ತ್ರಿಚಕ್ರ ವಾಹನ ಕಳವು ಮಾಡಿಕೊಂಡು ಹೋಗಿರುವುದಾಗಿ, ದೂರಿನಲ್ಲಿ ಆರೋಪಿಸಿದ್ದಾರೆ.
ಈ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಾನೂನು ಬಾಹಿರವಾಗಿ ಅಕ್ರಮ ಕೂಟ ಸೇರಿ ಶಾಂತಿ ಭಂಗ ಆರೋಪ : ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲು

Suddi Udaya

ಮುಂಡಾಜೆ ಸೀಟು ಬಳಿ ಬೊಲೇರೋ ಬೈಕ್ ಗೆ ಡಿಕ್ಕಿ : ಶಾಲಾ ಬಾಲಕಿ ಆಸ್ಪತ್ರೆಯಲ್ಲಿ ಮೃತ್ಯು

Suddi Udaya

ಕಣಿಯೂರು ಗ್ರಾ.ಪಂ. ಸದಸ್ಯ ಪ್ರವೀಣ್‌ ಗೌಡರಿಗೆ ತಿಮರೋಡಿ ತಂಡದಿಂದ ಹಲ್ಲೆ: ಪುತ್ತೂರು ಆಸ್ಪತ್ರೆಗೆ ದಾಖಲು: ಆಸ್ಪತ್ರೆಗೆ ಶಾಸಕ ಹರೀಶ್ ಪೂಂಜ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹರೀಶ್ ಪೂಂಜ ಆಕ್ರೋಶ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಯ ಹತ್ಯಡ್ಕ ಪರಿಸರದಲ್ಲಿ ಮರಗಳ ಮಾರಣ ಹೋಮ-ಸಚಿವರಿಗೆ ದೂರು

Suddi Udaya
error: Content is protected !!