23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

ಪಿಲ್ಯ: ಪಿಲ್ಯ ಗ್ರಾಮದ ನಿನ್ನಿಕಲ್ಲು ಎಂಬಲ್ಲಿ ವಿಶ್ವನಾಥ್

ಎಂಬಾತ ತನ್ನ ಅಡಿಕೆ ತೋಟದಲ್ಲಿ ಅಕ್ರಮವಾಗಿ ಮಾರಾಟದ ಉದ್ದೇಶಕ್ಕಾಗಿ ದಾಸ್ತಾನು ಇರಿಸಲಾಗಿದ್ದ ಮದ್ಯವನ್ನು
ಅಬಕಾರಿ ಇಲಾಖೆ ದಾಳಿ ನಡೆಸಿ 8.280 ಲೀ ಮದ್ಯವನ್ನು ವಶಪಡಿಸಿಕೊಂಡ ಪ್ರಕರಣ
ಮಾ. 31 ರಂದು ವರದಿಯಾಗಿದೆ.

ಅಬಕಾರಿ ಉಪ ಆಯುಕ್ತಕರು, ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು, ಹಾಗೂ ಅಬಕಾರಿ ಉಪ ಅಧೀಕ್ಷಕರು, ಬಂಟ್ವಾಳ ಉಪ ವಿಭಾಗ ರವರ ನಿರ್ದೆಶನದಂತೆ, ಸಾರ್ವತ್ರಿಕ ವಿಧಾನಸಭಾ ಚುನಾವಣೆ-2023ರ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಯಾವುದೇ ಅಬಕಾರಿ ಅಕ್ರಮ ಚಟುವಟಿಕೆಗಳು ನಡೆಯದಂತೆ ಗಸ್ತು ನಡೆಸುತ್ತಿರುವ ವೇಳೆ ಈ ಪ್ರಕರಣ ಪತ್ತೆಯಾಗಿದೆ.

ಸ್ಥಳದಿಂದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಮೌಲ್ಯ ಸುಮಾರು ರೂ.3,240 ಎಂದು ಅಂದಾಜಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಅಬಕಾರಿ ನಿರೀಕ್ಷಕ ನವೀನ್, ಉಪ ನಿರೀಕ್ಷಕ ಸಯ್ಯದ್ ಶಬೀರ್ ಹಾಗೂ ಕಾನ್ಸ್‌ಟೇಬಲ್ ಭೋಜ ಕೆ., ವಿನೋಯ್ ಸಿ.ಜಿ ಮತ್ತು ವಾಹನ ಚಾಲಕ ನವೀನ್ ಪಿ. ಭಾಗವಹಿಸಿದ್ದರು. ಪ್ರಕರಣವನ್ನು ನವೀನ್ ಕುಮಾರ್ ನಿರೀಕ್ಷಕರು, ದಾಖಲಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.

Related posts

ಪ್ರಿಕೆಜಿ ವಿದ್ಯಾರ್ಥಿ ಸಮಕ್ಷ್ ನ ಹುಟ್ಟು ಹಬ್ಬದ ಆಚರಣೆಯ ಪ್ರಯುಕ್ತ ಕುಂಭಶ್ರೀ ಆಂ.ಮಾ. ಶಾಲಾ ಕಾಲೇಜಿಗೆ ಗಡಿಯಾರ ಕೊಡುಗೆ

Suddi Udaya

ಕನ್ಯಾಡಿ ಶ್ರೀಗಳಿಂದ ರವೀಂದ್ರ ಪೂಜಾರಿ ಆರ್ಲರಿಗೆ ಗೌರವಾರ್ಪಣೆ

Suddi Udaya

ಜಿಲ್ಲಾ ವಕ್ಫ್‌ ಅಧಿಕಾರಿ ಹಾಜಿ ಅಬೂಬಕ್ಕರ್ ಸೇವೆಯಿಂದ ನಿವೃತ್ತಿ: ಕಾಜೂರು- ಕಿಲ್ಲೂರು ವತಿಯಿಂದ ಗೌರವಾರ್ಪಣೆ

Suddi Udaya

ಎಂಟು ದಿನಗಳ ಹಿಂದೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದ ಗಡಾ೯ಡಿ ಗ್ರಾಮದ ಮಜಲು ನಿವಾಸಿ ಸಂಜೀವ ಪೂಜಾರಿ ಸಾವು

Suddi Udaya

ಆನೆ ದಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಬೆಳ್ತಂಗಡಿ ಬಂಟರ ಸಂಘದಿಂದ ಭೇಟಿ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ದಿ| ಶೈಖುನಾ ಮರ್ಹೂಮ್ ಕೂರಾ ತಂಙಲ್ ಅವರ ಹೆಸರಿನಲ್ಲಿ ಅನುಸ್ಮರಣೆ ಕಾರ್ಯಕ್ರಮ

Suddi Udaya
error: Content is protected !!