September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

ವೇಣೂರು: ಸತತ ಮೂರು ಬಾರಿ ಕರ್ನಾಟಕ ರಾಜ್ಯದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಪುರಸ್ಕೃತ ಸಂಸ್ಥೆ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯದ 21 ನೇ ನೂತನ ಶಾಖೆ ವೇಣೂರಿನಲ್ಲಿ ಪ್ರಾರಂಭಗೊಂಡಿದೆ.

ವೇಣೂರು ಮಹಾವೀರನಗರದ ಮಂಜುಶ್ರೀ ಕಾಂಪ್ಲೆಕ್ಸ್ ನ ಒಂದನೇ ಮಹಡಿಯಲ್ಲಿ ನೂತನ ಸಂಸ್ಥೆ ಗ್ರಾಹಕರ ಸೇವೆಗೆ ರೆಡಿಯಾಗಿದೆ.21ನೇ ನೂತನ ಶಾಖೆಯ ಉದ್ಘಾಟನೆಯನ್ನು ಮಂಗಳೂರು ವಿ.ಜಿ.ಎಸ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲೋಕಯ್ಯ ಗೌಡ ಉದ್ಘಾಟಿಸಿ ಶುಭಕೋರಿದರು.

ದೀಪ ಪ್ರಜ್ವಲನೆಯನ್ನು ಬೆಳ್ತಂಗಡಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಪಿ.ತಿಮ್ಮಪ್ಪ ಗೌಡ ಬೆಳಾಲು ನೇರವೇರಿಸಿ ಶುಭಕೋರಿದರು. ಅಧ್ಯಕ್ಷತೆಯನ್ನು ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ ವಹಿಸಿದ್ದರು.

ಗಣಕೀಕರಣದ ಉದ್ಘಾಟನೆಯನ್ನು ವೇಣೂರು ಬಳ್ಳಾಲ್ ಪ್ಯೂಯೆಲ್ ಮತ್ತು ಸರ್ವಿಸಸ್ ನ ನವೀನ್ ಚಂದ್ರ ಬಳ್ಳಾಲ್ ನೆರವೇರಿಸಿದರು.ಭದ್ರತಾ ಕೊಠಡಿಯ ಉದ್ಘಾಟನೆಯನ್ನು ಮಂಜುಶ್ರೀ ಕಾಂಪ್ಲೆಕ್ಸ್ ಮಾಲಕ ಕೆ.ಉದಯ ಕುಮಾರ್ ಕಂಬಳಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷರಾದ ಮೋಹನ್ ರಾಂ ಸುಳ್ಳಿ,ನಿರ್ದೇಶಕರಾದ ಜಾಕೆ ಸದಾನಂದ,ನಿತ್ಯಾನಂದ ಮುಂಡೋಡಿ,ಎ‌.ವಿ ತೀರ್ಥರಾಮ,ಚಂದ್ರಾ ಕೋಲ್ಚಾರ್,ಕೆ.ಸಿ ನಾರಾಯಣ ಗೌಡ,ಕೆ.ಸಿ ಸದಾನಂದ,ಪಿ.ಎಸ್ ಗಂಗಾಧರ,ದಿನೇಶ್ ಮಡಪ್ಪಾಡಿ,ದಾಮೋದರ ಎನ್.ಎಸ್,ಜಯಲಲಿತಾ ಕೆ.ಎಸ್,ನಳಿನಿ ಸೂರಯ್ಯ,ಲತಾ ಎಸ್ ಮಾವಜಿ,ಹೇಮಚ್ಚಂದ್ರ ಐ.ಕೆ,ಶೈಲೇಶ್ ಅಂಬೆಕಲ್ಲು, ನವೀನ್ ಕುಮಾರ್ ಜೆ.ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಟಿ.ವಿಶ್ವನಾಥ ಹಾಗೂ ಬ್ಯಾಂಕಿನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಗ್ರಾ.ಪಂ. ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಕಕ್ಕಿಂಜೆ ಸ. ಪ್ರೌ. ಶಾಲಾ ಇಬ್ಬರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ :14ನೇ ವರ್ಷದ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ: ಗೌರಿ ಗಣೇಶ ವಿಗ್ರಹ ಪ್ರತಿಷ್ಠಾಪನೆ

Suddi Udaya

ಮುಂಡಾಜೆ ಸರಸ್ವತಿ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಂದ ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ನಮನ

Suddi Udaya

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಘಂಟೆ ಉದ್ಘಾಟನೆ; ಶಿವನ ನಾಮಸ್ಮರಣೆಯಿಂದ ಸಂಕಷ್ಟಗಳ ನಿವಾರಣೆ: ಡಾ.ಹೆಗ್ಗಡೆ

Suddi Udaya
error: Content is protected !!