25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ ಯಶಸ್ವಿ ಸಂಚಾಲಕರಾಗಿ ನಾಲ್ಕು ದಶಕಗಳಿಗೂ ಮಿಕ್ಕಿದ ಅನುಭವವಿರುವ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ಮೊದಲಾದ ಆಡಳಿತಾತ್ಮಕ ಅನುಭವ ಪರಿಗಣಿಸಿ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಅಗರಿ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.
ಅಗರಿ ಶೈಲಿಯನ್ನು ರಂಗದಲ್ಲಿ ಬಳಸಿ, ಅದರ ಉಳಿವು ಮತ್ತು ಬೆಳೆಯುವಿಕೆಯಲ್ಲಿ ತೊಡಗಿರುವ ಭಾಗವತ ಗಿರೀಶ್ ರೈ ಕಕ್ಯಪದವು ಅವರಿಗೆ ಅಗರಿ ಶೈಲಿ ಪ್ರಶಸ್ತಿ ಮತ್ತು ಅಗರಿ ಶ್ರೀನಿವಾಸ ಭಾಗವತರ ಶ್ರೀ ದೇವಿಮಹಾತ್ಮ ಪ್ರಸಂಗದ ವಿಶೇಷ ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿರುವ ವಾದಿರಾಜ ಕಲ್ಲೂರಾಯರಿಗೆ ಅಗರಿ ವಿಶೇಷ ಸನ್ಮಾನ ಈ ಸಂದರ್ಭ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ತಣ್ಣೀರುಪಂತ: ಕಲ್ಲೇರಿ ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ.2.26 ಕೋಟಿ ವ್ಯವಹಾರ, ರೂ.5.47 ಲಕ್ಷ ಲಾಭ

Suddi Udaya

ಉಜಿರೆ: ಆಲ್ವಿನ್ ಮೆಂಡೋನ್ಸಾ ನಿಧನ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ಯಾರೂ ನಾಮಪತ್ರ ಸಲ್ಲಿಸದ ಹಿನ್ನಲೆ ಪ್ರಭಾರ ಅಧ್ಯಕ್ಷರಾಗಿ ಪೂರ್ಣಾಕ್ಷ ಮುಂದುವರಿಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಯಕ್ಷಗಾನ ಕೇಂದ್ರದ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ

Suddi Udaya

ಸವಣಾಲು: ಕೋಳಿ ಅಂಕಕ್ಕೆ ಪೊಲೀಸರ ದಾಳಿ: ಪ್ರಕರಣ ದಾಖಲು

Suddi Udaya
error: Content is protected !!