ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ ಯಶಸ್ವಿ ಸಂಚಾಲಕರಾಗಿ ನಾಲ್ಕು ದಶಕಗಳಿಗೂ ಮಿಕ್ಕಿದ ಅನುಭವವಿರುವ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ಮೊದಲಾದ ಆಡಳಿತಾತ್ಮಕ ಅನುಭವ ಪರಿಗಣಿಸಿ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಅಗರಿ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.
ಅಗರಿ ಶೈಲಿಯನ್ನು ರಂಗದಲ್ಲಿ ಬಳಸಿ, ಅದರ ಉಳಿವು ಮತ್ತು ಬೆಳೆಯುವಿಕೆಯಲ್ಲಿ ತೊಡಗಿರುವ ಭಾಗವತ ಗಿರೀಶ್ ರೈ ಕಕ್ಯಪದವು ಅವರಿಗೆ ಅಗರಿ ಶೈಲಿ ಪ್ರಶಸ್ತಿ ಮತ್ತು ಅಗರಿ ಶ್ರೀನಿವಾಸ ಭಾಗವತರ ಶ್ರೀ ದೇವಿಮಹಾತ್ಮ ಪ್ರಸಂಗದ ವಿಶೇಷ ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿರುವ ವಾದಿರಾಜ ಕಲ್ಲೂರಾಯರಿಗೆ ಅಗರಿ ವಿಶೇಷ ಸನ್ಮಾನ ಈ ಸಂದರ್ಭ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶೇ 81.49 ಮತದಾನ: 2,28,871 ಮತದಾರರಲ್ಲಿ 1,86,506 ಮಂದಿ ಮತ ಚಲಾವಣೆ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ಅಳದಂಗಡಿ ‘ಶ್ರಮದಾನದ ಮೂಲಕ ಕೆದ್ದು ನರ್ಸರಿ ರಸ್ತೆ ಅಭಿವೃದ್ಧಿ ,ಗ್ರಾಮಸ್ಥರ ಸೇವೆಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಗುಂಡೂರಿ: ಗುಡ್ಡ ಜರಿದು ಮನೆ ಬದಿಯಲ್ಲಿ ಬಿದ್ದ ಮಣ್ಣಿನ ರಾಶಿಯ ತೆರವು ಕಾರ್ಯ

Suddi Udaya

ಧರ್ಮಸ್ಥಳ: ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮ ಇದರ ವಸ್ತು ಪ್ರದರ್ಶನ ಮಳಿಗೆ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರಿಂದ ಉದ್ಘಾಟನೆ

Suddi Udaya
error: Content is protected !!