April 2, 2025
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ ಯಶಸ್ವಿ ಸಂಚಾಲಕರಾಗಿ ನಾಲ್ಕು ದಶಕಗಳಿಗೂ ಮಿಕ್ಕಿದ ಅನುಭವವಿರುವ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ಮೊದಲಾದ ಆಡಳಿತಾತ್ಮಕ ಅನುಭವ ಪರಿಗಣಿಸಿ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಅಗರಿ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.
ಅಗರಿ ಶೈಲಿಯನ್ನು ರಂಗದಲ್ಲಿ ಬಳಸಿ, ಅದರ ಉಳಿವು ಮತ್ತು ಬೆಳೆಯುವಿಕೆಯಲ್ಲಿ ತೊಡಗಿರುವ ಭಾಗವತ ಗಿರೀಶ್ ರೈ ಕಕ್ಯಪದವು ಅವರಿಗೆ ಅಗರಿ ಶೈಲಿ ಪ್ರಶಸ್ತಿ ಮತ್ತು ಅಗರಿ ಶ್ರೀನಿವಾಸ ಭಾಗವತರ ಶ್ರೀ ದೇವಿಮಹಾತ್ಮ ಪ್ರಸಂಗದ ವಿಶೇಷ ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿರುವ ವಾದಿರಾಜ ಕಲ್ಲೂರಾಯರಿಗೆ ಅಗರಿ ವಿಶೇಷ ಸನ್ಮಾನ ಈ ಸಂದರ್ಭ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಸುಲ್ಕೇರಿ ಕುಲಾಲ ಕುಂಭಶ್ರೀ ಸಂಘದ ವತಿಯಿಂದ ಕುಲಾಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಎಸ್.ಎಸ್.ಎಲ್.ಸಿ ಸಾಧಕಿ ಪೂರ್ವಿಕ ರಿಗೆ ಸನ್ಮಾನ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya
error: Content is protected !!