July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ ಯಶಸ್ವಿ ಸಂಚಾಲಕರಾಗಿ ನಾಲ್ಕು ದಶಕಗಳಿಗೂ ಮಿಕ್ಕಿದ ಅನುಭವವಿರುವ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ಮೊದಲಾದ ಆಡಳಿತಾತ್ಮಕ ಅನುಭವ ಪರಿಗಣಿಸಿ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಅಗರಿ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.
ಅಗರಿ ಶೈಲಿಯನ್ನು ರಂಗದಲ್ಲಿ ಬಳಸಿ, ಅದರ ಉಳಿವು ಮತ್ತು ಬೆಳೆಯುವಿಕೆಯಲ್ಲಿ ತೊಡಗಿರುವ ಭಾಗವತ ಗಿರೀಶ್ ರೈ ಕಕ್ಯಪದವು ಅವರಿಗೆ ಅಗರಿ ಶೈಲಿ ಪ್ರಶಸ್ತಿ ಮತ್ತು ಅಗರಿ ಶ್ರೀನಿವಾಸ ಭಾಗವತರ ಶ್ರೀ ದೇವಿಮಹಾತ್ಮ ಪ್ರಸಂಗದ ವಿಶೇಷ ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿರುವ ವಾದಿರಾಜ ಕಲ್ಲೂರಾಯರಿಗೆ ಅಗರಿ ವಿಶೇಷ ಸನ್ಮಾನ ಈ ಸಂದರ್ಭ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ವತಿಯಿಂದ ತಹಶೀಲ್ದಾರ್ ಮುಖಾಂತರ ರಾಜ್ಯ ಸರಕಾರಕ್ಕೆ ಮನವಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ತನುಶ್ರೀ ರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya

ಧರ್ಮಸ್ಥಳದಲ್ಲಿ ಎರಡು ಆಟೋ ಹಾಗೂ ಮೂರು ಕಾರುಗಳ ನಡುವೆ ಸರಣಿ ಅಪಘಾತ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಒತ್ತಡ ನಿರ್ವಹಣೆ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!