25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಸಾಧಕರು

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಸುರತ್ಕಲ್‌ನ ಅಗರಿ ಶ್ರೀನಿವಾಸ ಭಾಗವತರ ಸಂಸ್ಮರಣಾ ವೇದಿಕೆ ಪ್ರತಿವರ್ಷ ನೀಡುವ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ.

ಐತಿಹಾಸಿಕ ದಾಖಲೆ ಹೊಂದಿರುವ ಶ್ರೀ ಧರ್ಮಸ್ಥಳ ಮೇಳದ ಯಶಸ್ವಿ ಸಂಚಾಲಕರಾಗಿ ನಾಲ್ಕು ದಶಕಗಳಿಗೂ ಮಿಕ್ಕಿದ ಅನುಭವವಿರುವ, ಧಾರ್ಮಿಕ, ಸಾಂಸ್ಕೃತಿಕ ಮತ್ತು ಶೈಕ್ಷಣಿಕ ಮತ್ತು ಬ್ಯಾಂಕಿಂಗ್ ಮೊದಲಾದ ಆಡಳಿತಾತ್ಮಕ ಅನುಭವ ಪರಿಗಣಿಸಿ ಡಿ.ಹರ್ಷೇಂದ್ರ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವೇದಿಕೆಯ ಕಾರ್ಯಾಧ್ಯಕ್ಷ ಅಗರಿ ರಾಘವೇಂದ್ರ ರಾವ್‌ ತಿಳಿಸಿದ್ದಾರೆ.
ಅಗರಿ ಶೈಲಿಯನ್ನು ರಂಗದಲ್ಲಿ ಬಳಸಿ, ಅದರ ಉಳಿವು ಮತ್ತು ಬೆಳೆಯುವಿಕೆಯಲ್ಲಿ ತೊಡಗಿರುವ ಭಾಗವತ ಗಿರೀಶ್ ರೈ ಕಕ್ಯಪದವು ಅವರಿಗೆ ಅಗರಿ ಶೈಲಿ ಪ್ರಶಸ್ತಿ ಮತ್ತು ಅಗರಿ ಶ್ರೀನಿವಾಸ ಭಾಗವತರ ಶ್ರೀ ದೇವಿಮಹಾತ್ಮ ಪ್ರಸಂಗದ ವಿಶೇಷ ಅಧ್ಯಯನ ನಡೆಸಿ ಪ್ರಬಂಧ ಮಂಡಿಸಿರುವ ವಾದಿರಾಜ ಕಲ್ಲೂರಾಯರಿಗೆ ಅಗರಿ ವಿಶೇಷ ಸನ್ಮಾನ ಈ ಸಂದರ್ಭ ನಡೆಸಲಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಕೊಲ್ಪಾಡಿಯಲ್ಲಿ ಮಕ್ಕಳ ಹುಣ್ಣಿಮೆಯ ಪ್ರಯುಕ್ತ ಆಟೋಟ ಸ್ಪರ್ಧೆ ಉದ್ಘಾಟನೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya
error: Content is protected !!