April 2, 2025
ತಾಲೂಕು ಸುದ್ದಿ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ಇದರ ವತಿಯಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ ಪಿನಾಕಿ ಸಭಾಭವನದಲ್ಲಿ ನಡೆಯಿತು.
ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ನಗರ ವ್ಯಾಪ್ತಿಯಲ್ಲಿ ಕಳೆದ ಐದು ವರ್ಷದಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ.ಈಗಾಗಲೇ‌ನಗರದ ಹೃದಯ ಭಾಗದಲ್ಲಿ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದ್ದು, ಬೆಳ್ತಂಗಡಿಯ ಸೌಂದರ್ಯಕ್ಕೆ ಮುಕುಟಪ್ರಾಯವಾಗಲಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ನಗರದಲ್ಲಿ ಅತೀ ಹೆಚ್ಚು ಮತ ಬರುವಂತೆ ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ, ನಗರ ಮಹಾಶಕ್ತಿಕೇಂದ್ರ ಅಧ್ಯಕ್ಷ ಗಣೇಶ್, ಯುವಮೋರ್ಚಾ ಅಧ್ಯಕ್ಷ ಯಶವಂತ ಗೌಡ, ಪಟ್ಟಣ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ಪ್ರಮುಖರಾದ ಮುಗುಳಿ ನಾರಾಯಣ ರಾವ್ ಇದ್ದರು.

Related posts

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya

ಅಳದಂಗಡಿ: ಇತ್ತೀಚೆಗೆ ಭಾರಿ ಗಾಳಿ , ಮಳೆಗೆ ಕುಸಿತಗೊಂಡ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ: ತಾತ್ಕಾಲಿಕ ಮನೆ ದುರಸ್ತಿಗೆ ನೆರವು

Suddi Udaya

ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆ: ಶ್ರೀ ಮಂ. ಅ. ಪ್ರೌಢಶಾಲೆಯ ಶಿಕ್ಷಕರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಳೆಂಜ: ‘ಪುಣ್ಯ ಕೋಟಿಗೆ ಒಂದು ಕೋಟಿ’ ನಂದಗೋಕುಲ ದೀಪೋತ್ಸವ: ಸಾಮೂಹಿಕ ಗೋಪೂಜೆ, ಗೋ ನಂದಾರತಿ

Suddi Udaya

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya
error: Content is protected !!