30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

ಮುಂಡಾಜೆ : ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಂಬೆಟ್ಟು ಪರಿಸರದಲ್ಲಿ  ಮತ್ತೆ ಚಿರತೆ ಹಾವಳಿ ಕಂಡುಬಂದಿದೆ. ಕಳೆದ ಒಂದು ವಾರದಿಂದ ಪರಿಸರದ ಸುಮಾರು ಐದು ನಾಯಿಗಳು ಚಿರತೆಗೆ ಬಲಿಯಾಗಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. .
ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯದ ಸಮೀಪ ಇರುವ ದುಂಬೆಟ್ಟಿನ ಚಾಮುಂಡಿನಗರ, ಪಣಿಕಲ್ಲು, ಕಜೆ ಮೊದಲಾದ ಪರಿಸರದಲ್ಲಿ ಸಂಚರಿಸುತ್ತಿರುವ ಚಿರತೆಗೆ ಸುಧಾಕರ ಗೌಡ, ಜಯಾನಂದ ಪಣಿಕಲ್ಲು, ಈಶ್ವರ, ವಿಶ್ವನಾಥ ಗೌಡ ಮೊದಲಾದವರ ಸಾಕುನಾಯಿಗಳು ಕಾಣೆಯಾಗಿದ್ದು ಚಿರತೆಗೆ ಬಲಿಯಾಗಿರುವ ಅನುಮಾನವಿದೆ . 
ಕಳೆದ ಎರಡು ದಿನಗಳ ಹಿಂದೆ ಸ್ಥಳೀಯ ವಿಜಯಾ ಎಂಬವರು ಬೆಳಗಿನ ಹೊತ್ತು ತರಗೆಲೆ ಸಂಗ್ರಹಿಸಲು ಕಾಡಿನತ್ತ ತೆರಳುತ್ತಿದ್ದಾಗ ಚಿರತೆಯನ್ನು ಹತ್ತಿರದಿಂದ ಕಂಡಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ಹುಲಿಗಣತಿ ಅಂಗವಾಗಿ ನಡೆದ ಕ್ಯಾಮರಾ ಟ್ರಾಪಿಂಗ್ ವೇಳೆ  ಸಮೀಪದ ಚಿಬಿದ್ರೆ ಅರಣ್ಯದಲ್ಲಿ ಚಿರತೆ ಸಂಚರಿಸಿದ  ಕುರುಹು   ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಒಂದೆರಡು ಬಾರಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೂ ಚಿರತೆ ಎದುರಾಗಿತ್ತು.

ಸ್ಥಳೀಯರಲ್ಲಿ ಆತಂಕ.
ದುಂಬೆಟ್ಟು ಹಾ ಸಮೀಪದ ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯ ಹೈನುಗಾರರು ಇದ್ದಾರೆ. ಇವರೆಲ್ಲರೂ ಜಾನುವಾರುಗಳನ್ನು ಕೊಟ್ಟಿಗೆಗಳಲ್ಲಿ ಕಟ್ಟಿ  ಸಾಕುತ್ತಿದ್ದಾರೆ.  ಕಾಡಿನ ದಾರಿಯ  ಮೂಲಕ ಹಾಲು ಉತ್ಪಾದಕರ ಸಂಘಗಳಿಗೆ ಹಾಲನ್ನು ನೀಡಲು  ಮಕ್ಕಳು, ಮಹಿಳೆಯರು ಸಂಚರಿಸುತ್ತಾರೆ. ಶಾಲಾ ವಿದ್ಯಾರ್ಥಿಗಳು ಇದೇ ದಾರಿಯಾಗಿ  ಸಂಚರಿಸಬೇಕಾಗಿದೆ. ಚಿರತೆ ಹಾವಳಿಯಿಂದ ಪ್ರದೇಶದ ಜನರಲ್ಲಿ ಆತಂಕ ಉಂಟಾಗಿದ್ದು ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.

Related posts

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆ ಹಳೆ ಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಕುಸಿತ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!