July 23, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ತಾಲೂಕು ಪರಿಶಿಷ್ಟ ವರ್ಗಗಳ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರ ಸಂಘ ಅಧ್ಯಕ್ಷರಾಗಿ ಲಿಂಗಪ್ಪ ನಾಯ್ಕ, ಉಪಾಧ್ಯಕ್ಷರಾಗಿ ಲಲಿತಾ

Suddi Udaya

ಬೆಳ್ತಂಗಡಿಯಲ್ಲಿ ನೂರಾ ಗೋಲ್ಡ್ & ಡೈಮಂಡ್ಸ್ ಉದ್ಘಾಟನೆ

Suddi Udaya

ನೆರಿಯ: ಬೀಜದಡಿ ನಿವಾಸಿ ಗೋಪಿ ನಿಧನ

Suddi Udaya

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಶಿಶಿಲ ಸ.ಉ.ಹಿ.ಪ್ರಾ.ಶಾಲೆಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಂದಾರು : ಹಲವು ಮಂದಿ ಕಾಂಗ್ರೆಸ್‌ ಪ್ರಮುಖರು ಬಿಜೆಪಿ ‌ಸೇರ್ಪಡೆ

Suddi Udaya
error: Content is protected !!