ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

ಅಳದಂಗಡಿ: ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ಹತ್ತಿರ ಪಂಚಮಿ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ಸತ್ಯದೇವತೆ ಎಂಟರ್ ಪ್ರೈಸಸ್ ಇದರ ಶುಭಾರಂಭವು ಇತ್ತೀಚೆಗೆ ನಡೆಯಿತು.

ನೂತನ ಸಂಸ್ಥೆಯನ್ನು ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ ದೀಪ ಪ್ರಜ್ವಲಿಸಿ ಸಂಸ್ಥೆಯು ಅಭಿವೃದ್ಧಿ ಪಥದಲ್ಲಿ ಸಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಸದಾನಂದ ಪೂಜಾರಿ ಉಂಗೀಲಬೈಲು, ಪಂಚಮಿ ಕಾಂಪ್ಲೆಕ್ಸ್ ಮಾಲಕ ಪ್ರಸನ್ನ ಮಯ್ಯ, ಮಾಲಕರ ಮಾತೃಶ್ರೀ ಪದ್ಮಾವತಿ, ಯುವ ಉದ್ಯಮಿ ಪ್ರಶಾಂತ್-ಪ್ರೀಯಾ, ರಾಜೇಶ್-ರೂಪಾ, ಸುನೀಲ್ ಕಾಪಿನಡ್ಕ, ಆನಂದ ಪೂಜಾರಿ ಕಾಪಿನಡ್ಕ, ರತ್ನಾಕರ ಪೂಜಾರಿ, ಚಿತ್ತರಂಜನ್, ಪ್ರವೀಣ್ ಹಾಗೂ ಬಂಧು ಮಿತ್ರರು ಉಪಸ್ಥಿತರಿದ್ದು ಶುಭಕೋರಿದರು.

ನೂತನ ಸಂಸ್ಥೆಗೆ ಆಗಮಿಸಿದ ಅತಿಥಿಗಣ್ಯರನ್ನು ಸಂಸ್ಥೆಯ ಮಾಲಕರಾದ ಶ್ರೀಮತಿ ಸುಶ್ಮಿತಾ ಮತ್ತು ಜಗದೀಶ್ ಪೂಜಾರಿ ದಂಪತಿ, ಮಗು ಶ್ರೀಜಾ ಆತ್ಮೀಯವಾಗಿ ಸ್ವಾಗತಿಸಿದರು.

ಎಲೆಕ್ಟ್ರಿಕಲ್ ಮತ್ತು ಪ್ಲಂಬಿಂಗ್ ಮೆಟೀರಿಯಲ್ಸ್

ನಮ್ಮ‌ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ಸ್ ಮತ್ತು ಪ್ಲಂಬಿಂಗ್ ಗೆ ಸಂಬಂಧಪಟ್ಟ ಎಲ್ಲ ಉಪಕರಣಗಳು, ವಯರ್, ಸ್ವಿಚ್ ಬೋರ್ಡ್, ಎಲ್.ಇ.ಡಿ ಬಲ್ಬ್,ಪಿವಿಸಿ ಪೈಪ್, ಚೆಯರ್, ಐರನ್ ಬಾಕ್ಸ್, ಮಿಕ್ಸಿ, ಕೇಬಲ್, ಫ್ಯಾನ್, ಪೈಪ್, ನಳ್ಳಿ ಹಾಗೂ ಎಲ್ಲಾ ರೀತಿಯ ಸಾಮಾಗ್ರಿಗಳು ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ಜಗದೀಶ್ ಪೂಜಾರಿ ಪೆರಾಜೆ ತಿಳಿಸಿದರು.

Related posts

ನಡ -ಕನ್ಯಾಡಿ ಕಾಂಗ್ರೆಸ್ ಗ್ರಾಮ ಸಮಿತಿ ರಚನೆ: ಅಧ್ಯಕ್ಷರಾಗಿ ಜಾಕೀರ್ ಹುಸೇನ್

Suddi Udaya

ಅ.24: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಸಮರ ಸನ್ನಾಹ ತಾಳಮದ್ದಳೆ

Suddi Udaya

ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ : ನಾಯಕತ್ವ ಭವಿಷ್ಯದ ಜೀವನಕ್ಕೆ ಬುನಾದಿ: ಸಿ.ಕೆ. ರೋಹಿಣಿ

Suddi Udaya

ಪ್ರೇರಣ ಸಂಜೀವಿನಿ ಒಕ್ಕೂಟ ಹಾಗೂ ಕೃಷಿ ಇಲಾಖೆಯ ಸಹಯೋಗದಲ್ಲಿ ಜೇನು ಕೃಷಿ ತರಬೇತಿ

Suddi Udaya

ಗಂಡಿಬಾಗಿಲು: ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

Suddi Udaya
error: Content is protected !!