22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಆರಂಭಗೊಂಡಿದ್ದು, ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.

ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ

ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ

ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಇಂದಬೆಟ್ಟು: ಗಂಗಾಧರ್ ಎಸ್. ರವರ ತೋಟದಲ್ಲಿ ಬೃಹತಾಕಾರದ ಹೆಬ್ಬಾವು ಪತ್ತೆ

Suddi Udaya

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಉಜಿರೆಯಲ್ಲಿ ರಸ್ತೆ ಸುರಕ್ಷತಾ ಸಪ್ತಾಹ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಕವನವಾಚನ ಸ್ಪರ್ಧೆಯಲ್ಲಿ ಕರಾಯ ಸ.ಪ್ರೌ. ಶಾಲೆಯ ವಿದ್ಯಾರ್ಥಿನಿ ಆಯಿಷತ್ ರಿಶ್ಬಾ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ : ನಡ ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಿಲ್ವಿಯ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಹೆಚ್ ಪ್ರಸಾದ್

Suddi Udaya
error: Content is protected !!