24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಶಾಲಾ ಕಾಲೇಜು

ಧರ್ಮಸ್ಥಳ “ರಂಗಶಿವ”ಬಳಗದಿಂದ ಮಕ್ಕಳ ರಂಗ ಶಿಬಿರ “ನಲಿಯೋಣ ಬಾ- 2023”

ಧರ್ಮಸ್ಥಳ: ಧರ್ಮಸ್ಥಳದ  ರಂಗಶಿವ  ಕಲಾಬಳಗ  ತಂಡದ ವತಿಯಿಂದ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಡಿ.ಹರ್ಷೇಂದ್ರ ಕುಮಾರ್ ಮತ್ತು ಶ್ರೀಮತಿ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರ ಸಹಕಾರದೊಂದಿಗೆ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರ ಪರಿಕಲ್ಪನೆ ಹಾಗೂ ಮಾರ್ಗದರ್ಶನದಲ್ಲಿ 6ನೇ ತರಗತಿಯಿಂದ 9ನೇ ತರಗತಿವರೆಗಿನ ಮಕ್ಕಳಿಗೆ “ನಲಿಯೋಣು   ಬಾ 2023 “ಬೇಸಿಗೆ ಶಿಬಿರವನ್ನು ಶ್ರೀ ಕ್ಷೇತ್ರದ ಚಂದ್ರನಾಥ ಸ್ವಾಮಿ ಬಸದಿಯ ಚಂದ್ರಶಾಲೆಯಲ್ಲಿ ಎ.2 ರಂದು ಮಾತೃಶ್ರೀ ಡಾ. ಹೇಮಾವತಿ ಹೆಗ್ಗಡೆಯವರು ಮಕ್ಕಳೊಂದಿಗೆ ದೀಪ ಬೆಳಗಿಸಿ ,ಗಿಡಕ್ಕೆ ನೀರುಣಿಸುವುದರೊಂದಿಗೆ ಉದ್ಘಾಟಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಬಿರಾರ್ಥಿಗಳು ಶಿಬಿರದಲ್ಲಿ ಮುಕ್ತವಾಗಿ ಬೆರೆತು ತಮ್ಮಲ್ಲಿರುವ ಸುಪ್ತ ಪ್ರತಿಭೆಗಳನ್ನು ರಂಗಕಲೆಗಳ ಮೂಲಕ ಒರೆಗೆ ಹಚ್ಚಿ ಅಭಿವ್ಯಕ್ತಗೊಳಿಸಿ ಸೃಜನಶೀಲ ರಂಗ ಚಟುವಟಿಕೆಗಳ ಮೂಲಕ  ತಮ್ಮ ವ್ಯಕ್ತಿತ್ವ ವಿಕಸನ ಮಾಡಿಕೊಳ್ಳಿ. ರಂಗ ಚಟುವಟಿಕೆಯಲ್ಲಿ ಭಾಗವಹಿಸುವುದರ ಮೂಲಕ ಕಲಾವಿದರಾಗಿ ಗುರುತಿಸಿಕೊಂಡು ಸಾಧನೆಯ ಶಿಖರವೇರಬಹುದು ಎಂದು ಸಲಹೆ ನೀಡಿದರು. ಅವರು ತನ್ನ ಬಾಲ್ಯದ ಸಂತೋಷದ ಕ್ಷಣಗಳನ್ನು ,ಅನುಭವಗಳನ್ನು  ಮಕ್ಕಳಿಗೆ ಅರ್ಥಪೂರ್ಣವಾಗಿ ಮನಮುಟ್ಟುವಂತೆ  ಹೇಳಿ ತಮ್ಮ ಜೀವನಾನುಭವದ ಮಧುರ ಕ್ಷಣಗಳನ್ನು ಮಕ್ಕಳಿಗೆ ಹೇಳಿ ಬಾಲ್ಯವನ್ನು ಧನ್ಯತೆಯಿಂದ ಸ್ಮರಿಸಿಕೊಂಡರು.

  ಇಂದಿನ ಯುವ ಜನಾಂಗ ಮೊಬೈಲ್ ಎಂಬ ಮಾಯಾಜಾಲಕ್ಕೆ ಬಲಿಯಾಗದೆ ತಮ್ಮ ಸುತ್ತು ಮುತ್ತಲಿನ ಗಿಡಮರ, ಪಶುಪಕ್ಷಿ, ಪ್ರಾಣಿಗಳು, ಹಣ್ಣುಗಳು, ಹೂಗಳ ಬಗ್ಗೆ ಮಾಹಿತಿ ಕಲೆಹಾಕಿ ,ಅನ್ನಾಹಾರ ಅಪವ್ಯಯ ಮಾಡದೇ ,ಪ್ರಕೃತಿ ಪರಿಸರ ಸಂರಕ್ಷಣೆ ಮಾಡುತ್ತೇವೆಂಬ ದೃಢ ಸಂಕಲ್ಪ ಮಾಡುವಂತೆ ಕಿವಿಮಾತು ಹೇಳಿದರು.  ರಂಗಶಿವ ಕಲಾಬಳಗದ ಅಧ್ಯಕ್ಷ ರಾಜೇಂದ್ರದಾಸ್ ಪ್ರಸ್ತಾವಿಸಿ, 12  ದಿನಗಳ ಶಿಬಿರದಲ್ಲಿ ಪ್ರಕೃತಿ ಪರಿಸರ ವೀಕ್ಷಣೆ, ವನವಿಹಾರ, ಹಾವುಗಳು ಹಾಗು ಪ್ರಾಣಿ ಪಕ್ಷಿಗಳ ಪರಿಚಯ, ನಟನೆಯ ತರಬೇತಿ, ಜಾನಪದ ಹಾಡುಗಳು, ಅಜ್ಜಿ ಕತೆಗಳು, ತುರ್ತು ಸೇವಾ ವಿಭಾಗಗಳು, ಗಿಡಮೂಲಿಕೆ, ಔಷಧೀಯ ಸಸ್ಯಗಳು, ಕಾಡುಗಿಡ  ಮತ್ತು ಹಣ್ಣುಗಳು, ವಿವಿಧ ರೀತಿಯ ಎಲೆ ಗಳು, ಪುರಾಣ ಕಥೆಗಳು, ಹಿರಿಯರಿಂದ ಹಳೆಯ ಕಾಲದ ಜಾನಪದ ಕಟ್ಟುಕತೆಗಳ ಜತೆಗೆ  4 ಪೂರ್ಣಾವಧಿಯ ನಾಟಕ ತರಬೇತಿ ಇತ್ಯಾದಿ ಚಟುವಟಿಕೆಗಳನ್ನು ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು. ಸುನಿಲ್ ಶೆಟ್ಟಿ ಕಲ್ಕೊಪ್ಪ ಕಾರ್ಯಕ್ರಮ ನಿರೂಪಿಸಿದರು. ಭುಜಬಲಿ ಧರ್ಮಸ್ಥಳ,ಮಲ್ಲಿನಾಥ ಜೈನ್ , ರಂಗಶಿವ ತಂಡದ  ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Related posts

ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಭೇಟಿ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಶ್ರೀ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಲಾ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್ ಸರ್ ಭೇಟಿ

Suddi Udaya

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಕ್ಕಿಂಜೆಯ ಮನೆಯ ಶೆಡ್ ನಲ್ಲಿ ನಿಲ್ಲಿಸಿದ್ದ ಇನೋವಾ ಕಾರು ಕಳ್ಳತನ ಪ್ರಕರಣ: ನಾಲ್ವರನ್ನು ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವಿಶ್ವ ದಿನಾಚರಣೆ

Suddi Udaya
error: Content is protected !!