37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

ಬೆಳಾಲು ಗ್ರಾಮದ ಕೊಯ್ಯೂರು ಅರಣ್ಯದ ಪೆರಿಯಡ್ಕ ಪ್ರದೇಶದಲ್ಲಿ ಭಾನುವಾರ ಬೆಂಕಿ ಪ್ರಕರಣ ಉಂಟಾಗಿದ್ದು ಸುಮಾರು ಎರಡು ಎಕರೆ ಪ್ರದೇಶದ ವನ್ಯ ಸಂಪತ್ತಿಗೆ ಹಾನಿ ಉಂಟಾಗಿದೆ.
ಅರಣ್ಯ ಇಲಾಖೆಯ ಉಪ್ಪಿನಂಗಡಿ ವಲಯದ ಕಣಿಯೂರು ಉಪವಲಯ ವ್ಯಾಪ್ತಿಯ ಈ ಕಾಡಿನಲ್ಲಿ ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದುಬಂದಿಲ್ಲ.


ಡಿ ಆರ್ ಎಫ್ ಒ ಲೋಕೇಶ್ ,ಗಸ್ತು ಅರಣ್ಯ ಪಾಲಕ ವಿನಯ ಚಂದ್ರ, ಶೌರ್ಯ ವಿಪತ್ತು ತಂಡಗಳ ಸದಸ್ಯರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತಂದರು.
ಮುಂಡಾಜೆ-ಧರ್ಮಸ್ಥಳ ಅರಣ್ಯದ ಅಲ್ಲಲ್ಲಿ ಬೆಂಕಿ.
ಮುಂಡಾಜೆ-ಧರ್ಮಸ್ಥಳ ಮೀಸಲು ಅರಣ್ಯದ ನೇರ್ತನೆ, ಎಕ್ಕೆಲ, ಕೋಟಿ ಹಿತ್ತಿಲು ಮೊದಲಾದ ಪ್ರದೇಶಗಳಲ್ಲಿ ಅರಣ್ಯದಲ್ಲಿ ಬೆಂಕಿ ಉಂಟಾಗಿದ್ದು ಅದು ಒಂದಿಷ್ಟು ಹತೋಟಿಗೆ ಬರುತ್ತಿದ್ದಂತೆ ಮುಂಡ್ರುಪಾಡಿ, ಫಿಲತಡ್ಕ ಮೊದಲಾದ ಪ್ರದೇಶಗಳಲ್ಲಿ ಬೆಂಕಿ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಅನೇಕ ಮಂದಿ ಸೇರಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನ ನಡೆಸುತ್ತಿದ್ದಾರೆ.ಬೆಂಕಿ ಒಂದೆಡೆ ಹತೋಟಿಗೆ ಬರುತ್ತಿದ್ದಂತೆ ಇನ್ನೊಂದೆಡೆಯಿಂದ ಆವರಿಸುತ್ತಿದೆ. ಭಾರಿ ಬಿಸಿಲಿನ ವಾತಾವರಣ ಕಾರ್ಯಾಚರಣೆಗೆ ಅಡ್ಡಿ ನೀಡುತ್ತಿದೆ.
ಬೆಂಕಿಗೆ ಕಾರಣ.


ಕಾಡಿನಿಂದ ಕಟ್ಟಿಗೆ, ತರಗೆಲೆ ಇತ್ಯಾದಿ ಸಂಗ್ರಹಿಸಲು ಹೋಗುವ ಮಂದಿ ಒಣ ಹುಲ್ಲಿಗೆ ಬೆಂಕಿ ಹಚ್ಚುವುದರಿಂದ ಬೆಂಕಿ ಪ್ರಕರಣಗಳು ಉಂಟಾಗುತ್ತಿವೆ ಎಂಬ ಕೆ ವ್ಯಕ್ತವಾಗಿದೆ. ಕಾಡುಪ್ರಾಣಿಗಳನ್ನು ಓಡಿಸಲು ಅರಣ್ಯ ಪ್ರದೇಶಗಳಿಗೆ ಬೆಂಕಿ ಹಚ್ಚುವವರು ಇದ್ದಾರೆ. ಇದೀಗ ಕಾಡು ಜೇನು ಸಂಗ್ರಹದ ಸಮಯವಾಗಿದ್ದು ಜೇನು ನೊಣಗಳನ್ನು ಓಡಿಸಲು ಹೊಗೆ ಹಾಕಿ ಬಳಿಕ ಬೆಂಕಿಯನ್ನು ಆರಿಸದೆ ವಾಪಸ್ ಆಗುವವರು ಇದ್ದಾರೆ ಇವರೆಲ್ಲರ ಜತೆ ಕಿಡಿಗೇಡಿಗಳು ಕೆಲವೊಂದು ಪ್ರಕರಣಗಳಿಗೆ ಕಾರಣವಾಗುತ್ತಿದ್ದಾರೆ.

Related posts

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಕಬ್ಸ್, ಬುಲ್ ಬುಲ್, ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಂದ ಚಿಂತನಾ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಗೆ ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆಯವರಿಂದ 650 ಊಟದ ಸ್ಟೀಲ್ ತಟ್ಟೆ ಹಸ್ತಾಂತರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜು ಸತತ 12 ನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಜ.2: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಮತ್ತು ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಶ್ರೀ ಲಕ್ಷ್ಮೀ ಜನಾರ್ದನ ಮತ್ತು ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಎಸ್‌.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜು – ಭಿತ್ತಿ ಪತ್ರಿಕೆ ಅನಾವರಣ

Suddi Udaya
error: Content is protected !!