22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

ಬೆಳಾಲು ಗ್ರಾಮದ ಕೊಯ್ಯೂರು ಅರಣ್ಯದ ಪೆರಿಯಡ್ಕ ಪ್ರದೇಶದಲ್ಲಿ ಭಾನುವಾರ ಬೆಂಕಿ ಪ್ರಕರಣ ಉಂಟಾಗಿದ್ದು ಸುಮಾರು ಎರಡು ಎಕರೆ ಪ್ರದೇಶದ ವನ್ಯ ಸಂಪತ್ತಿಗೆ ಹಾನಿ ಉಂಟಾಗಿದೆ.
ಅರಣ್ಯ ಇಲಾಖೆಯ ಉಪ್ಪಿನಂಗಡಿ ವಲಯದ ಕಣಿಯೂರು ಉಪವಲಯ ವ್ಯಾಪ್ತಿಯ ಈ ಕಾಡಿನಲ್ಲಿ ಯಾವ ಕಾರಣದಿಂದ ಬೆಂಕಿ ಉಂಟಾಗಿದೆ ಎಂದು ತಿಳಿದುಬಂದಿಲ್ಲ.


ಡಿ ಆರ್ ಎಫ್ ಒ ಲೋಕೇಶ್ ,ಗಸ್ತು ಅರಣ್ಯ ಪಾಲಕ ವಿನಯ ಚಂದ್ರ, ಶೌರ್ಯ ವಿಪತ್ತು ತಂಡಗಳ ಸದಸ್ಯರು, ಅಗ್ನಿಶಾಮಕ ದಳ ಹಾಗೂ ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತಂದರು.
ಮುಂಡಾಜೆ-ಧರ್ಮಸ್ಥಳ ಅರಣ್ಯದ ಅಲ್ಲಲ್ಲಿ ಬೆಂಕಿ.
ಮುಂಡಾಜೆ-ಧರ್ಮಸ್ಥಳ ಮೀಸಲು ಅರಣ್ಯದ ನೇರ್ತನೆ, ಎಕ್ಕೆಲ, ಕೋಟಿ ಹಿತ್ತಿಲು ಮೊದಲಾದ ಪ್ರದೇಶಗಳಲ್ಲಿ ಅರಣ್ಯದಲ್ಲಿ ಬೆಂಕಿ ಉಂಟಾಗಿದ್ದು ಅದು ಒಂದಿಷ್ಟು ಹತೋಟಿಗೆ ಬರುತ್ತಿದ್ದಂತೆ ಮುಂಡ್ರುಪಾಡಿ, ಫಿಲತಡ್ಕ ಮೊದಲಾದ ಪ್ರದೇಶಗಳಲ್ಲಿ ಬೆಂಕಿ ಹರಡುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸ್ಥಳೀಯ ಅನೇಕ ಮಂದಿ ಸೇರಿ ಬೆಂಕಿಯನ್ನು ಹತೋಟಿಗೆ ತರಲು ಪ್ರಯತ್ನ ನಡೆಸುತ್ತಿದ್ದಾರೆ.ಬೆಂಕಿ ಒಂದೆಡೆ ಹತೋಟಿಗೆ ಬರುತ್ತಿದ್ದಂತೆ ಇನ್ನೊಂದೆಡೆಯಿಂದ ಆವರಿಸುತ್ತಿದೆ. ಭಾರಿ ಬಿಸಿಲಿನ ವಾತಾವರಣ ಕಾರ್ಯಾಚರಣೆಗೆ ಅಡ್ಡಿ ನೀಡುತ್ತಿದೆ.
ಬೆಂಕಿಗೆ ಕಾರಣ.


ಕಾಡಿನಿಂದ ಕಟ್ಟಿಗೆ, ತರಗೆಲೆ ಇತ್ಯಾದಿ ಸಂಗ್ರಹಿಸಲು ಹೋಗುವ ಮಂದಿ ಒಣ ಹುಲ್ಲಿಗೆ ಬೆಂಕಿ ಹಚ್ಚುವುದರಿಂದ ಬೆಂಕಿ ಪ್ರಕರಣಗಳು ಉಂಟಾಗುತ್ತಿವೆ ಎಂಬ ಕೆ ವ್ಯಕ್ತವಾಗಿದೆ. ಕಾಡುಪ್ರಾಣಿಗಳನ್ನು ಓಡಿಸಲು ಅರಣ್ಯ ಪ್ರದೇಶಗಳಿಗೆ ಬೆಂಕಿ ಹಚ್ಚುವವರು ಇದ್ದಾರೆ. ಇದೀಗ ಕಾಡು ಜೇನು ಸಂಗ್ರಹದ ಸಮಯವಾಗಿದ್ದು ಜೇನು ನೊಣಗಳನ್ನು ಓಡಿಸಲು ಹೊಗೆ ಹಾಕಿ ಬಳಿಕ ಬೆಂಕಿಯನ್ನು ಆರಿಸದೆ ವಾಪಸ್ ಆಗುವವರು ಇದ್ದಾರೆ ಇವರೆಲ್ಲರ ಜತೆ ಕಿಡಿಗೇಡಿಗಳು ಕೆಲವೊಂದು ಪ್ರಕರಣಗಳಿಗೆ ಕಾರಣವಾಗುತ್ತಿದ್ದಾರೆ.

Related posts

ಬಾರ್ಯ: ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ರಚನೆಗೆ ಶ್ರೀ ಕ್ಷೇ.ಧ. ಗ್ರಾ ಯೋಜನೆಯಿಂದ ದೇಣಿಗೆ ಹಸ್ತಾಂತರ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ತೆಲಿಕೆದ ಬೊಳ್ಳಿ ಅರವಿಂದ್ ಬೋಳಾರ್ ರವರಿಗೆ ಬೆಳ್ತಂಗಡಿ ಮುಳಿಯ ಗೋಲ್ಡ್ & ಡೈಮಂಡ್ ವತಿಯಿಂದ ಸನ್ಮಾನ

Suddi Udaya

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!