July 23, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಬೆಳ್ತಂಗಡಿಯ ವಕೀಲರ ಸಂಘದ ಚುನಾವಣೆ: ಬಿರುಸಿನ ಮತದಾನ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya

ಉಜಿರೆ : ಬೆನಕ ಹೆಲ್ತ್ ಸೆಂಟರ್ ವತಿಯಿಂದ ಬದನಾಜೆ ಸ.ಉ.ಪ್ರಾ. ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya
error: Content is protected !!