July 23, 2026
ಗ್ರಾಮಾಂತರ ಸುದ್ದಿ

ಮೇಲಂತಬೆಟ್ಟು ಭಗವತಿ ದೇವಸ್ಥಾನ ರಸ್ತೆಗೆ ಹಾಕಿದ್ದ ಬೇಲಿ ತೆರವು


ಬೆಳ್ತಂಗಡಿ: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಸಂಪರ್ಕ ರಸ್ತೆಗೆ ಏಕಾಏಕಿ ಹಾಕಲಾಗಿರುವ ಬೇಲಿಯನ್ನು ಪೊಲೀಸರು ಹಾಗೂ ಮೇಲಂತಬೆಟ್ಟು ಗ್ರಾ.ಪಂ.ನ ಪ್ರಮುಖರ ಸಮ್ಮುಖದಲ್ಲಿ ತೆರವುಗೊಳಿಸಲಾಯಿತು.
ಮೇಲಂತಬೆಟ್ಟು ದೇವಸ್ಥಾನದಲ್ಲಿ ಎ. ೩ರಿಂದ ೭ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿದ್ದು, ಈ ಸಂಬಂಧ ಸಂಪರ್ಕ ರಸ್ತೆಯನ್ನು ನಿನ್ನೆ ಅಗಲೀಕರಣಗೊಳಿಸುವ ಕೆಲಸ ಆರಂಭಿಸಿದಾಗ, ಇದು ತಮಗೆ ಸೇರಿದ ಜಾಗ ಎಂದು ಹೇಳಿ ರಸ್ತೆ ಅಭಿವೃದ್ಧಿಗೆ ಸ್ಥಳೀಯರಾದ ಸಚಿನ್ ನೂಜೋಡಿ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ತಡರಾತ್ರಿ ಬೇಲಿ ಹಾಕಿ ಬಂದ್ ಮಾಡಿದ್ದರು. ಏಕಾಏಕಿ ರಸ್ತೆಯನ್ನು ಬಂದ್ ಮಾಡಿದ್ದರಿಂದ ಭಕ್ತರಿಗೆ ಸಮಸ್ಯೆಯಾಗಿದ್ದು, ಸಂಜೆ
ಪೊಲೀಸರು ಹಾಗೂ ಪಂಚಾಯತ್‌ರವರ ಸಮ್ಮುಖದಲ್ಲಿ ಬೇಲಿಯನ್ನು ತೆರವುಗೊಳಿಸಲಾಗಿದೆ ಎಂದು ವರದಿಯಾಗಿದೆ.

Related posts

ಬೆಳ್ತಂಗಡಿ: ವಿದ್ಯುತ್ ಗುತ್ತಿಗೆದಾರ ಬೆನೆಡಿಕ್ಟ್ ವೇಗಸ್ ನಿಧನ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಗಾಂಜಾ ನಶೆಯಲ್ಲಿ ಅಡ್ಡಾದಿಡ್ಡಿ ಕಾರು ಚಲಾಯಿಸಿದ ಯುವಕ ಪೊಲೀಸ್ ವಶ: ಚಿಕ್ಕಮಗಳೂರು ದೊನಿಗದ್ದೆ ನಿವಾಸಿ ಸಂತೋಷ್ ಬಂಧನ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಬಳಂಜ ಗ್ರಾ.ಪಂ. ನಲ್ಲಿ ಕೈ ಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya
error: Content is protected !!