
ಲಾಯಿಲ: ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವವು ಎ.2 ರಂದು ಲಾಯಿಲ ಗುತ್ತು ಅಜೆಕಾರು ಸ್ಥಾನದಲ್ಲಿ ನಡೆಯಿತು.
ಸಂಜೆ ಲಾಯಿಲಗುತ್ತಿನಿಂದ ಶ್ರೀ ಕೊಡಮಣಿತ್ತಾಯ ಕಲ್ಕುಡ, ಕಲ್ಲುರ್ಟಿ ದೈವಗಳ ಭಂಡಾರ ಹೊರಟು ರಾತ್ರಿ ಅನ್ನಸಂತರ್ಪಣೆ ನಡೆಯಿತು. ನಂತರ ಲಾಯಿಲಗುತ್ತು ಶ್ರೀ ಕೊಡಮಣಿತ್ತಾಯ ಮತ್ತು ಕಲ್ಕುಡ ಕಲ್ಲುರ್ಟಿ ದೈವಗಳಿಗೆ ದೊಂಪದ ಬಲಿ ಉತ್ಸವ ಜರುಗಿತು.
ಶಾಸಕ ಹರೀಶ್ ಪೂಂಜ ಬೇಟಿ ನೀಡಿ ದೈವಗಳ ಆರ್ಶೀವಾದ ಪಡೆದರು.

ಈ ಸಂದರ್ಭದಲ್ಲಿ ಲಾಯಿಲಗುತ್ತು ಚಿತ್ತರಂಜನ್ ಹೆಗ್ಡೆ, ಮಹಾವೀರ ಅಜ್ರಿ., ಲಾಯಿಲ ಗ್ರಾ.ಪಂ. ಉಪಾಧ್ಯಕ್ಷ ಗಣೇಶ್, ಸದಸ್ಯರಾದ ಅರವಿಂದ, ಪ್ರಸದ್ ಶೆಟ್ಟಿ ಮತ್ತು ಪಂಚಾಯತ್ ಸದಸ್ಯರು, ಉಪಾಧ್ಯಕ್ಷ ಗೀರೀಶ್ ಡೊಂಗ್ರೇ. ಯೋಗೀಶ್ ಬಿಢೆ ಹಾಗೂ ಊರ ಹಾಗೂ ಪರವೂರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.















