September 6, 2026
ಪ್ರಮುಖ ಸುದ್ದಿ

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,
ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.
ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಪಾಕ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಮನೋಹರ ಪಡಿವಾಳ್ , ಭಗೀರಥ ಜಿ. ,ರಮಾನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಳ್ಳತನ ಪ್ರಕರಣವನ್ನು ಭೇದಿಸಿದ ಬಂಟ್ವಾಳ ಪೊಲೀಸರು: ಆರೋಪಿ ತೆಕ್ಕಾರು ನಿವಾಸಿ ಮಹಮ್ಮದ್ ಫಾರೂಕ್ ಮತ್ತು ಕಳವುಗೈದ ನಗದು ವಶ

Suddi Udaya

ಸಾರಿಗೆ ಬಸ್‌ನಲ್ಲಿ ಹೆಚ್ಚಿದ ಜನಸಂದಣಿ; ವಿದ್ಯಾರ್ಥಿಗಳ, ಉದ್ಯೋಗಿಗಳ ಪರದಾಟ; ಹೆಚ್ಚುವರಿ ಬಸ್‌ಗೆ ಪ್ರಯಾಣಿಕರ ಆಗ್ರಹ

Suddi Udaya

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು-ಪಟ್ರಮೆ ಇದರ 2024ರ ಕ್ಯಾಲೆಂಡರ್ ಬಿಡುಗಡೆ

Suddi Udaya

ಜ.4: ಮರೋಡಿ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ಅಕ್ರಮ ಶಸ್ತ್ರಾಸ್ತ್ರ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಜಾಮೀನು ಅರ್ಜಿ ವಜಾ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!