April 2, 2025
ಗ್ರಾಮಾಂತರ ಸುದ್ದಿ

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

ಮುಂಡಾಜೆ : ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಂಬೆಟ್ಟು ಪರಿಸರದಲ್ಲಿ  ಮತ್ತೆ ಚಿರತೆ ಹಾವಳಿ ಕಂಡುಬಂದಿದೆ. ಕಳೆದ ಒಂದು ವಾರದಿಂದ ಪರಿಸರದ ಸುಮಾರು ಐದು ನಾಯಿಗಳು ಚಿರತೆಗೆ ಬಲಿಯಾಗಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. .
ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯದ ಸಮೀಪ ಇರುವ ದುಂಬೆಟ್ಟಿನ ಚಾಮುಂಡಿನಗರ, ಪಣಿಕಲ್ಲು, ಕಜೆ ಮೊದಲಾದ ಪರಿಸರದಲ್ಲಿ ಸಂಚರಿಸುತ್ತಿರುವ ಚಿರತೆಗೆ ಸುಧಾಕರ ಗೌಡ, ಜಯಾನಂದ ಪಣಿಕಲ್ಲು, ಈಶ್ವರ, ವಿಶ್ವನಾಥ ಗೌಡ ಮೊದಲಾದವರ ಸಾಕುನಾಯಿಗಳು ಕಾಣೆಯಾಗಿದ್ದು ಚಿರತೆಗೆ ಬಲಿಯಾಗಿರುವ ಅನುಮಾನವಿದೆ . 
ಕಳೆದ ಎರಡು ದಿನಗಳ ಹಿಂದೆ ಸ್ಥಳೀಯ ವಿಜಯಾ ಎಂಬವರು ಬೆಳಗಿನ ಹೊತ್ತು ತರಗೆಲೆ ಸಂಗ್ರಹಿಸಲು ಕಾಡಿನತ್ತ ತೆರಳುತ್ತಿದ್ದಾಗ ಚಿರತೆಯನ್ನು ಹತ್ತಿರದಿಂದ ಕಂಡಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ಹುಲಿಗಣತಿ ಅಂಗವಾಗಿ ನಡೆದ ಕ್ಯಾಮರಾ ಟ್ರಾಪಿಂಗ್ ವೇಳೆ  ಸಮೀಪದ ಚಿಬಿದ್ರೆ ಅರಣ್ಯದಲ್ಲಿ ಚಿರತೆ ಸಂಚರಿಸಿದ  ಕುರುಹು   ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಒಂದೆರಡು ಬಾರಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೂ ಚಿರತೆ ಎದುರಾಗಿತ್ತು.

ಸ್ಥಳೀಯರಲ್ಲಿ ಆತಂಕ.
ದುಂಬೆಟ್ಟು ಹಾ ಸಮೀಪದ ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯ ಹೈನುಗಾರರು ಇದ್ದಾರೆ. ಇವರೆಲ್ಲರೂ ಜಾನುವಾರುಗಳನ್ನು ಕೊಟ್ಟಿಗೆಗಳಲ್ಲಿ ಕಟ್ಟಿ  ಸಾಕುತ್ತಿದ್ದಾರೆ.  ಕಾಡಿನ ದಾರಿಯ  ಮೂಲಕ ಹಾಲು ಉತ್ಪಾದಕರ ಸಂಘಗಳಿಗೆ ಹಾಲನ್ನು ನೀಡಲು  ಮಕ್ಕಳು, ಮಹಿಳೆಯರು ಸಂಚರಿಸುತ್ತಾರೆ. ಶಾಲಾ ವಿದ್ಯಾರ್ಥಿಗಳು ಇದೇ ದಾರಿಯಾಗಿ  ಸಂಚರಿಸಬೇಕಾಗಿದೆ. ಚಿರತೆ ಹಾವಳಿಯಿಂದ ಪ್ರದೇಶದ ಜನರಲ್ಲಿ ಆತಂಕ ಉಂಟಾಗಿದ್ದು ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ನಾರಾವಿ ಬಂಟರ ವಲಯದ ಕೊಕ್ರಾಡಿ ಗ್ರಾಮ ಸಮಿತಿ ಸಭೆ

Suddi Udaya

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಬೆಳ್ತಂಗಡಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಬೆಳ್ತಂಗಡಿ ತಾಲೂಕು ಮಟ್ಟದ ಯೂನಿಯನ್ ರಚನೆ

Suddi Udaya

ಕೊಕ್ಕಡ: ಪೂವಾಜೆ ಇಬರ ರಸ್ತೆಯ ಹತ್ತಿರ ಸರ್ಕಾರಿ ಗೇರು ಪ್ಲಾಂಟೇಶನ್ ಗೆ ತಗುಲಿದ ಬೆಂಕಿ

Suddi Udaya
error: Content is protected !!