22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮುಂಡಾಜೆಯ ದುಂಬೆಟ್ಟು ಪ್ರದೇಶದಲ್ಲಿ ಚಿರತೆ ಹಾವಳಿ

ಮುಂಡಾಜೆ : ಮುಂಡಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದುಂಬೆಟ್ಟು ಪರಿಸರದಲ್ಲಿ  ಮತ್ತೆ ಚಿರತೆ ಹಾವಳಿ ಕಂಡುಬಂದಿದೆ. ಕಳೆದ ಒಂದು ವಾರದಿಂದ ಪರಿಸರದ ಸುಮಾರು ಐದು ನಾಯಿಗಳು ಚಿರತೆಗೆ ಬಲಿಯಾಗಿರುವ ಕುರಿತು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ. .
ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯದ ಸಮೀಪ ಇರುವ ದುಂಬೆಟ್ಟಿನ ಚಾಮುಂಡಿನಗರ, ಪಣಿಕಲ್ಲು, ಕಜೆ ಮೊದಲಾದ ಪರಿಸರದಲ್ಲಿ ಸಂಚರಿಸುತ್ತಿರುವ ಚಿರತೆಗೆ ಸುಧಾಕರ ಗೌಡ, ಜಯಾನಂದ ಪಣಿಕಲ್ಲು, ಈಶ್ವರ, ವಿಶ್ವನಾಥ ಗೌಡ ಮೊದಲಾದವರ ಸಾಕುನಾಯಿಗಳು ಕಾಣೆಯಾಗಿದ್ದು ಚಿರತೆಗೆ ಬಲಿಯಾಗಿರುವ ಅನುಮಾನವಿದೆ . 
ಕಳೆದ ಎರಡು ದಿನಗಳ ಹಿಂದೆ ಸ್ಥಳೀಯ ವಿಜಯಾ ಎಂಬವರು ಬೆಳಗಿನ ಹೊತ್ತು ತರಗೆಲೆ ಸಂಗ್ರಹಿಸಲು ಕಾಡಿನತ್ತ ತೆರಳುತ್ತಿದ್ದಾಗ ಚಿರತೆಯನ್ನು ಹತ್ತಿರದಿಂದ ಕಂಡಿರುವುದಾಗಿ ತಿಳಿಸಿದ್ದಾರೆ.

ಕಳೆದ ವರ್ಷ ಹುಲಿಗಣತಿ ಅಂಗವಾಗಿ ನಡೆದ ಕ್ಯಾಮರಾ ಟ್ರಾಪಿಂಗ್ ವೇಳೆ  ಸಮೀಪದ ಚಿಬಿದ್ರೆ ಅರಣ್ಯದಲ್ಲಿ ಚಿರತೆ ಸಂಚರಿಸಿದ  ಕುರುಹು   ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಒಂದೆರಡು ಬಾರಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸವಾರರಿಗೂ ಚಿರತೆ ಎದುರಾಗಿತ್ತು.

ಸ್ಥಳೀಯರಲ್ಲಿ ಆತಂಕ.
ದುಂಬೆಟ್ಟು ಹಾ ಸಮೀಪದ ಪ್ರದೇಶಗಳಲ್ಲಿ ಸಾಕಷ್ಟು ಸಂಖ್ಯೆಯ ಹೈನುಗಾರರು ಇದ್ದಾರೆ. ಇವರೆಲ್ಲರೂ ಜಾನುವಾರುಗಳನ್ನು ಕೊಟ್ಟಿಗೆಗಳಲ್ಲಿ ಕಟ್ಟಿ  ಸಾಕುತ್ತಿದ್ದಾರೆ.  ಕಾಡಿನ ದಾರಿಯ  ಮೂಲಕ ಹಾಲು ಉತ್ಪಾದಕರ ಸಂಘಗಳಿಗೆ ಹಾಲನ್ನು ನೀಡಲು  ಮಕ್ಕಳು, ಮಹಿಳೆಯರು ಸಂಚರಿಸುತ್ತಾರೆ. ಶಾಲಾ ವಿದ್ಯಾರ್ಥಿಗಳು ಇದೇ ದಾರಿಯಾಗಿ  ಸಂಚರಿಸಬೇಕಾಗಿದೆ. ಚಿರತೆ ಹಾವಳಿಯಿಂದ ಪ್ರದೇಶದ ಜನರಲ್ಲಿ ಆತಂಕ ಉಂಟಾಗಿದ್ದು ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ದೂರು ಸಲ್ಲಿಸಲು ಮುಂದಾಗಿದ್ದಾರೆ.

Related posts

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಇಂದಿನಿಂದ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ: ಸಂಜೆ ಹೊರೆಕಾಣಿಕೆ ವೈಭವ ಹಾಗೂ ಒಂದು ಸಾವಿರ ಅಧಿಕ ಮಕ್ಕಳಿಂದ ನೃತ್ಯ ಭಜನೆ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಎನ್.ಇ.ಟಿ. ನರ್ಸಿಂಗ್ ಕಾಲೇಜಿನಲ್ಲಿ ಬಿ.ಎಸ್.ಸಿ. ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗಿಸುವಿಕೆ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಗಾಂಧಿ ಸಂವಾದ ಶತಮಾನದ ಆಚರಣೆ: ಬೆಳ್ತಂಗಡಿಯಲ್ಲಿ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya
error: Content is protected !!