23.7 C
ಪುತ್ತೂರು, ಬೆಳ್ತಂಗಡಿ
May 19, 2025
ಪ್ರಮುಖ ಸುದ್ದಿ

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,
ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.
ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಪಾಕ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಮನೋಹರ ಪಡಿವಾಳ್ , ಭಗೀರಥ ಜಿ. ,ರಮಾನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ, ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ರಾಜೀನಾಮೆ ಒತ್ತಾಯಿಸಿ ಬೆಳ್ತಂಗಡಿ ಬಿಜೆಪಿ ವತಿಯಿಂದ ಪ್ರತಿಭಟನೆ

Suddi Udaya

ಥಿಯರಿಟಿಕಲ್ ಫಿಸಿಕ್ಸ್ ನಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧಕ್ಕೆ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ನಿಂದ ರಂಜಿತ್ ಕುಮಾರ್ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya

ಬೆಳ್ತಂಗಡಿ: ನಾಮಪತ್ರ ಹಿಂತೆಗೆದುಕೊಂಡ ಇಬ್ಬರು ಅಭ್ಯರ್ಥಿಗಳು

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!