25.8 C
ಪುತ್ತೂರು, ಬೆಳ್ತಂಗಡಿ
March 6, 2026
ಪ್ರಮುಖ ಸುದ್ದಿ

ಶ್ರೀ ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವ : ಪಾಕ ಶಾಲೆ ಉದ್ಘಾಟನೆ

ಮೇಲಂತಬೆಟ್ಟು: ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಪಾಕ ಶಾಲೆಯನ್ನು ಜಗದೀಶ್ ಪಡಿವಾಳ್ ಮಾಪಲಾಡಿ ಬೆಂಗಳೂರು ಉದ್ಘಾಟಿಸಿದರು. ,
ಎ.೩ರಂದು ತಂತ್ರಿಗಳನ್ನು ಪೂರ್ಣಕುಂಭದೊಂದಿಗೆ ಕ್ಷೇತ್ರಕ್ಕೆ ಸ್ವಾಗತಿಸಲಾಯಿತು.
ಬಳಿಕ ಆಚಾರ್ಯವರಣ, ದೇವನಾಂದೀ, ತೋರಣ ಮೂಹೂರ್ತ, ಉಗ್ರಾಣ ಮುಹೂರ್ತ, ಭೂ ಶುದ್ದಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.
. ಎ.೪ರಂದು ಬೆಳಗ್ಗೆ ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮೇಲಂತಬೆಟ್ಟು ದೇವಸ್ಥಾನಕ್ಕೆ ಭಕ್ತರಿಂದ ಹೊರಕಾಣಿಕೆ ಹಾಗೂ ದೇವಸ್ಥಾನದಲ್ಲಿ ಪ್ರತಿಷ್ಠಾಪನೆ ಗೊಳ್ಳಲಿರುವ ನೂತನ ಗಣಪತಿ ವಿಗ್ರಹ ಹಾಗೂ ಶ್ರೀ ನಾರಾಯಣ ಗುರುಗಳ ಪೀಠದ ಮೆರವಣಿಗೆ ನಡೆಯಲಿದೆ.
ಪಾಕ ಶಾಲೆ ಉದ್ಘಾಟನೆ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಯೋಗೀಶ್ ಪೂಜಾರಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಡಾ. ಎಂ.ಎಂ ದಯಾಕರ್ ಭಟ್ ಉಜಿರೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಸುರೇಶ್ ಶೆಟ್ಟಿ ಭ್ರಾಮರಿ ಮಾಪಲಾಡಿ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಜಯಾನಂದ ಲಾಯಿಲ, ಕಾರ್ಯಾಧ್ಯಕ್ಷ ನಾರಾಯಣ ಪೂಜಾರಿ ಬರೆಮೇಲು, ಪ್ರಧಾನ ಕಾರ್ಯದರ್ಶಿ ರಾಜೀವ ಸಾಲಿಯಾನ್ ಮುಂಡೂರು, ಕೋಶಾಧಿಕಾರಿ ಪ್ರಶಾಂತ್ ಕುದ್ಯಾಡಿ, ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಬಂಗೇರ ಅಂಕಾಜೆ, ಪ್ರಧಾನ ಕಾರ್ಯದರ್ಶಿ ಮೋಹನ್ ಬಟ್ಯರಡ್ಡ, ಸ್ವಾಗತ ಸಮಿತಿ ಸಂಚಾಲಕ ಚಂದ್ರರಾಜ್ ನೂಜೆಲು, ಮನೋಹರ ಪಡಿವಾಳ್ , ಭಗೀರಥ ಜಿ. ,ರಮಾನಂದ ಸಾಲಿಯಾನ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಯೋಗೀಶ್ ಕುಲಾಲ್ ಪಕ್ಕಿದಕಲ, ಪ್ರಧಾನ ಅರ್ಚಕ ಯಶವಂತ ಶಾಂತಿ, ಭಜನಾ ಸಮಿತಿ ಅಧ್ಯಕ್ಷ ತಿಮ್ಮಪ್ಪ ಪೂಜಾರಿ ಮಾಪಲಾಡಿ ಹಾಗೂ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಿಯಂತ್ರಣ ತಪ್ಪಿ ಮೋರಿಗೆ ಡಿಕ್ಕಿ ಹೊಡೆದ ಬೈಕ್ : ಇಂದಬೆಟ್ಟು ನಿವಾಸಿ ಜೋಶನ್ ಸ್ಥಳದಲ್ಲೇ ಸಾವು

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ : ಸಿಡಿಲು ಬಡಿದು ಮನೆಗೆ ಹಾನಿ, ಅಪಾರ ನಷ್ಟ

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya
error: Content is protected !!